ಮುಂಡಾಜೆ: ಮಹಿಳಾ ಗ್ರಾಮಸಭೆ- ಮಹಿಳೆಯರ ದಿನನಿತ್ಯದ ಬದುಕಿನಲ್ಲಿ ಸಾಹಿತ್ಯದ ಪಾತ್ರ ವಿಚಾರ ಸಂಕಿರಣ

0

ಮುಂಡಾಜೆ: ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮಾ.7ರಂದು ಮಹಿಳಾ ಪ್ರಕಾರ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಬೆಳ್ತಂಗಡಿ ತಾಲೂಕು ಸಮಿತಿ, ಮತ್ತು ಗ್ರಾಮ ಪಂಚಾಯಿತಿ ಮುಂಡಾಜೆ ಹಾಗೂ ನೇತ್ರಾವತಿ ಸಂಜೀವಿನಿ ಒಕ್ಕೂಟ ಮುಂಡಾಜೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಗ್ರಾಮ ಸಭೆ ಮತ್ತು “ಮಹಿಳೆಯರ ದಿನನಿತ್ಯದ ಬದುಕಿನಲ್ಲಿ ಸಾಹಿತ್ಯದ ಪಾತ್ರ” ಎಂಬ ವಿಷಯದಲ್ಲಿ ವಿಚಾರ ಸಂಕಿರಣ ಜರುಗಿತು.

ವಿಶೇಷ ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ತಾಲೂಕು ಸಮಿತಿಯ ಅಧ್ಯಕ್ಷೆ ಡಾ.ಮೀನಾಕ್ಷಿ ರಾಮಚಂದ್ರ ಇವರು ಮಹಿಳೆಯರು ತಮ್ಮ ದಿನ ನಿತ್ಯದ ಬದುಕಿನಲ್ಲಿ ಎದುರಿಸುವ ವಿವಿಧ ಸನ್ನಿವೇಶಗಳನ್ನು ಬಳಸಿಕೊಂಡು ಹೇಗೆ ಸಾಹಿತ್ಯವನ್ನು ರಚಿಸಬಹುದು. ಮತ್ತು ಸಾಹಿತ್ಯಕ ವಿಷಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಯಾವ ಬದುಕು ನಿರ್ಮಲವಾಗುತ್ತದೆ ಎಂಬ ವಿಷಯಗಳ ಬಗ್ಗೆ ಮಾರ್ಗದರ್ಶನ ನೀಡಿದರು.

ಮಹಿಳಾ ಪ್ರಕಾರ,ಅಖಿಲ ಭಾರತೀಯ ಸಾಹಿತ್ಯ ಪರಿಷತ್, ಬೆಳ್ತಂಗಡಿ ತಾಲೂಕು ಸಮಿತಿಯ ಪ್ರಮುಖರಾಗಿರುವ ಶ್ರೀಮತಿ ವಿದ್ಯಾ ಶ್ರೀ ಅಡೂರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಂಡಾಜೆ ಗ್ರಾಮ ಪಂಚಾಯತ್ ನ ಅಧ್ಯಕ್ಷ ಕೆ ಗಣೇಶ್ ಬಂಗೇರ ಇವರು ವಹಿಸಿದ್ದರು.

ಮುಂಡಾಜೆ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ ಇವರು ಮುಖ್ಯ ಅತಿಥಿಯಾಗಿದ್ದರು.ವೇದಿಕೆಯಲ್ಲಿ ನೇತ್ರಾವತಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಭವಾನಿ ಶೆಟ್ಟಿಯವರು ಮತ್ತು ಮುಂಡಾಜೆ ಗ್ರಾಮ ಪಂಚಾಯತ್ ನ ಸದಸ್ಯೆ ದಿಶಾ ಪಟವರ್ಧನ್ ಅವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಉಪಸಿತರಿದ್ದ ಎಲ್ಲ ಮಹಿಳೆಯರಿಗೆ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಮಹಿಳಾ ಪ್ರಕಾರದ ಪರವಾಗಿ ಕವನ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಸದಸ್ಯರು ಭಾಗವಹಿಸಿದ್ದರು.ಮೊದಲ ಮೂರು ವಿಜೇತರಿಗೆ ಅಭಾಸಪದ ಮಹಿಳಾ ಪ್ರಕಾರದ ಪರವಾಗಿ ಬಹುಮಾನಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ನಿರೂಪಣೆಯನ್ನು ಮಹಿಳಾ ಪ್ರಕಾರದ ಸದಸ್ಯರಾಗಿರುವಂತಹ ರೇಣುಕಾ ಸುಧೀರ್ ಇವರು ನಿರ್ವಹಿಸಿದರು.ದಿಶಾ ಪಟವರ್ಧನ್ ಇವರು ಪ್ರಾರ್ಥನಾ ಶ್ಲೋಕವನ್ನು ಹಾಡಿದರು. ಮೇಘನ ಪ್ರಶಾಂತ್ ಗಣ್ಯರನ್ನು ಸ್ವಾಗತಿಸಿದರು.ಕಾರ್ಯಕ್ರಮದ ಕೊನೆಯಲ್ಲಿ ಸಂತೋಷಿನಿ ಕಾರಂತ್ ಇವರು ವಂದನಾರ್ಪಣೆಯನ್ನ ಸಲ್ಲಿಸಿದರು.

LEAVE A REPLY

Please enter your comment!
Please enter your name here