Site icon Suddi Belthangady

ಉಜಿರೆ: ಎಸ್.ಡಿ.ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ ಕಾರ್ಯಕ್ರಮ

ಉಜಿರೆ: ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ (Tech Vyuh) ಕಾರ್ಯಕ್ರಮವನ್ನು ಮಾ.6ರಂದು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಡಾ.ಹೆಚ್ ಮನೋಜ್ ಟಿ ಗಡಿಯಾರ್ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಇವರು ಮೂರು ತತ್ವಗಳಾದ ನಿರ್ದೇಶನ, ಪ್ರಯತ್ನ ಮತ್ತು ಶಿಸ್ತನ್ನು ಅನುಸರಿಸುವ ಮೂಲಕ ಜೀವನದಲ್ಲಿ ಹೇಗೆ ಯಶಸ್ವಿಯಾಗಬಹುದು ಎಂಬುದರ ಕುರಿತು ಮಾತನಾಡಿದರು.

ಹಾಗೂ ಈ ಕಾರ್ಯಕ್ರಮದ ಗೌರವ ಅತಿಥಿಯಾದ ಈ ಕಾಲೇಜಿನ ಹಳೆ ವಿದ್ಯಾರ್ಥಿ ಶಶಿಕಾಂತ್ ಇವರು ಮಾತನಾಡಿ ವಿದ್ಯಾರ್ಥಿಗಳಿಗೆ ಉನ್ನತ ಅಧ್ಯಯನವನ್ನು ಮುಂದುವರಿಸಿ ಹಾಗೂ ಭವಿಷ್ಯಕ್ಕಾಗಿ ಸೂಕ್ತವಾದ ಶೈಕ್ಷಣಿಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ನ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿಯಾಗಿ ಸೋಮಶೇಖರ್ ಇವರು ಅತಿಥಿಯಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಕಾಲೇಜಿನ ಪ್ರಾಂಶುಪಾಲ ಸಂತೋಷ್, ವಿಭಾಗದ ಮುಖ್ಯಸ್ಥ ದಿನೇಶ್ ಹಾಗೂ ಕಾಲೇಜಿನ ವ್ಯವಸ್ಥಾಪಕ ಚಂದ್ರನಾಥ್ ಜೈನ್ ಇವರು ವೇದಿಕೆಯಲ್ಲಿ ಆಸೀನರಾಗಿದ್ದರು.

ಈ ಕಾರ್ಯಕ್ರಮವನ್ನು ನಮ್ಮ ವಿದ್ಯಾರ್ಥಿಯಾದ ಹನಿಶ್ ರವರು ಸ್ವಾಗತಿಸಿ, ಸ್ಫೂರ್ತಿಯವರು ಧನ್ಯವಾದ ಸಮರ್ಪಣೆಯನ್ನು ಮಾಡಿದರು ಹಾಗೂ ವಿದ್ಯಾರ್ಥಿನಿ ಪುನೀತ ಕಾರ್ಯಕ್ರಮ ನಿರೂಪಣೆ ಮಾಡಿದರು.

Exit mobile version