ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಶಿಬಿರ

0

ನೆರಿಯ: ಗಂಡಿಬಾಗಿಲು ಸಿಯೋನ್ ಆಶ್ರಮ ಟ್ರಸ್ಟ್ ನಲ್ಲಿ ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿಯ ರಾಷ್ಟ್ರೀಯ ಸೇವಾ ಯೋಜನಾ ವಿದ್ಯಾರ್ಥಿಗಳಿಂದ ಶಿಬಿರವನ್ನು ಫೆ.29ರಿಂದ ಮಾ.06ರವರೆಗೆ ಹಮ್ಮಿಕೊಳ್ಳಲಾಗಿತ್ತು.

ಶಿಬಿರಾರ್ಥಿಗಳು ಸಿಯೋನ್ ಆಶ್ರಮದಲ್ಲಿ ಸ್ವಚ್ಛತಾ ಕಾರ್ಯಗಳನ್ನು ನಿರ್ವಹಿಸುವುದರೊಂದಿಗೆ ವಿವಿಧ ಮನೋರಂಜನಾ ಕಾರ್ಯಕ್ರಮಗಳನ್ನು ನೀಡಿ ಆಶ್ರಮ ನಿವಾಸಿಗಳನ್ನು ಮನರಂಜಿಸಿದರು.

ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷ ಸ್ಥಾನವನ್ನು ರಾಧಾಕೃಷ್ಣ ಹೆಚ್.ಬಿ., ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರು ವಹಿಸಿಕೊಂಡಿದ್ದರು.

ಮುಖ್ಯ ಅತಿಥಿಗಳಾಗಿ ಪ್ರೋ.ಹರಿಪ್ರಸಾದ್ ಬಿ. ಶೆಟ್ಟಿ, ಯತೀಶ್ ಎಂ. ಶೆಟ್ಟಿ, ಪ್ರವೀಣ್ ಗಟ್ಟಿ ಬಸ್ತಿಕೋಡಿ, ಉದಯಕುಮಾರ್ ಶೆಟ್ಟಿ ಕುಂಡೋಳಿಗುತ್ತು, ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್, ಆಡಳಿತ ಮಂಡಳಿ ಸದಸ್ಯ ಮೇರಿ ಯು.ಪಿ. ಮತ್ತು ಸುಭಾಷ್ ಯು.ಪಿ., ಮ್ಯಾನೇಜರ್ ಸಂಧ್ಯಾ ಸುಭಾಷ್, ಕಾಲೇಜಿನ ಪ್ರಾದ್ಯಾಪಕರುಗಳು ಉಪಸ್ಥಿತರಿದ್ದರು.

ಶಿಬಿರದ ಮುಂದಾಳತ್ವವನ್ನು ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಖಾರಿಗಳಾದ ಡಾ.ಮೇರಿ ಎಂ.ಜೆ. ಹಾಗೂ ಉದಯ್ ಕುಮಾರ್ ರವರು ವಹಿಸಿಕೊಂಡಿದ್ದರು.

LEAVE A REPLY

Please enter your comment!
Please enter your name here