ಬೆಳ್ತಂಗಡಿ: ಕರ್ನಾಟಕ ಸರ್ಕಾರ ಮತ್ತು ಕಂದಾಯ ಇಲಾಖೆ ವತಿಯಿಂದ ಹಕ್ಕು ಪತ್ರ ವಿತರಣೆ

0

ಬೆಳ್ತಂಗಡಿ: ಕರ್ನಾಟಕ ಸರ್ಕಾರ ಮತ್ತು ಕಂದಾಯ ಇಲಾಖೆ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 94ಸಿ ಮತ್ತು 94ಸಿಸಿ ಹಕ್ಕು ಪತ್ರ ವಿತರಣೆ ಮಾ.10ರಂದು ಕೆಲ್ಲಗುತ್ತು ಕಿನ್ಯಮ್ಮ ಯಾನೆ ಗುಣವತಿ ಸಭಾಂಗಣದಲ್ಲಿ ನಡೆಯಿತು. ‌

ಹಕ್ಕು ಪತ್ರ ವಿತರಣೆಯನ್ನುಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಹಕ್ಕುಪತ್ರ ವಿತರಣೆ ಮಾಡಿದ್ದರು‌.ಒಟ್ಟು 138 ಮಂದಿ 94 ಸಿ ಮತ್ತು 94ಸಿಸಿ ಹಕ್ಕು ಪತ್ರ ಫಲಾನುಭವಿಗಳು.ಸಾಂಕೇತಿಕವಾಗಿ ಸ್ವಲ್ಪ ಮಂದಿಗೆ ವಿತರಣೆ ಮಾಡಲಾಯಿತು.

ಇನ್ನೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ ನಿನ್ನೆ ಅತ್ಯುತ್ತಮ ಗ್ಯಾರಂಟಿ ಕಾರ್ಯಕ್ರಮ ನಡೆದಿದೆ ಕಾಂಗ್ರೆಸ್ ಸರ್ಕಾರ ಜನ ಪರವಿರುವಂತಹ ಸರ್ಕಾರ,ಜನರಿಗೆ ಒಳ್ಳೆಯ ಆಡಳಿತ ‌ನೀಡುತ್ತೇವೆ ಮುಂದಿನ ದಿನಗಳಲ್ಲಿ ಬೆಳ್ತಂಗಡಿಯಲ್ಲಿ ಜನತಾ ದರ್ಶನ ಕಾರ್ಯಕ್ರಮ ಮಾಡುತ್ತೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್, ಮಂಜುನಾಥ ಭಂಡಾರಿ, ಕರ್ನಾಟಕ ಗೇರು ನಿಗಮದ ಅಧ್ಯಕ್ಷೆ ಮಮತಾ ಶೆಟ್ಟಿ.ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

LEAVE A REPLY

Please enter your comment!
Please enter your name here