ಪ್ರೊ.ನಾ ಉಜಿರೆ ನಿಧನಕ್ಕೆ ಡಿ.ಯದುಪತಿ ಗೌಡರಿಂದ ಸಂತಾಪ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿಗಳು, ಪತ್ರಕರ್ತರು, ಬರಹಗಾರರೂ ಆಗಿರುವ ಪ್ರೊ. ನಾ ಉಜಿರೆಯವರ ನಿಧನಕ್ಕೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಹಿಂದಿ ಮತ್ತು ಕನ್ನಡ ಭಾಷೆಯಲ್ಲಿ ಪಾಂಡಿತ್ಯವುಳ್ಳವರಾಗಿ, ಉತ್ತಮ ಶಿಕ್ಷಕರು ಮತ್ತು  ಅಧ್ಯಯನಶೀಲರು ಎಂದು ಹೆಸರು ಪಡೆದವರು.

1999ರಂದು ಮುಂಡಾಜೆಯಲ್ಲಿ ಜರಗಿದ ಬೆಳ್ತಂಗಡಿ ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದವರು.

ತಾಲೂಕಿನ ಸಾಹಿತ್ಯ ಚಟುವಟಿಕೆಗಳಲ್ಲಿ, ಸಂಘಟನಾ ಕಾರ್ಯಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಕೊಂಡವರು ಎಂದು ಅಗಲಿದ ಆತ್ಮಕ್ಕೆ ಶಾಂತಿಯನ್ನು ಬಯಸಿ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಯದುಪತಿ ಗೌಡ ಸಂತಾಪ ಸೂಚಿಸಿದರು.

LEAVE A REPLY

Please enter your comment!
Please enter your name here