ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಪ್ರೊ.ನಾ ವುಜಿರೆ ನಿಧನಕ್ಕೆ ಸಂತಾಪ

0

ಉಜಿರೆ: ಪ್ರೊ.ಎನ್.ನಾಗರಾಜ ಪೂವಣಿ (ನಾ.ವುಜಿರೆ) ಯವರು ಬೆಳ್ತಂಗಡಿ ಜೈನ್ ಮಿಲನ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ತುಳು, ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆಗಳಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಇವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.

ಇವರು ಕಥೆ, ಕಾವ್ಯ, ಅನುವಾದ ಕ್ಷೇತ್ರಗಳಲ್ಲಿ ಹಾಗೂ ಕಾರ್ಯಕ್ರಮ ನಿರೂಪಕರಾಗಿ, ವೈಚಾರಿಕ ಬರಹಗಳ ಮೂಲಕವೂ ಗುರುತಿಸಿಕೊಂಡವರು.

ಕರ್ನಾಟಕ ಸಾಹಿತ್ಯ ಅಕಾಡಮಿಯ ಪುರಸ್ಕಾರ, ದ.ಕ.ಜಿಲ್ಲಾ ರಾಜೋತ್ಸವ ಪ್ರಶಸ್ತಿ, ರತ್ನಾಕರವರ್ಣಿ ಪ್ರಶಸ್ತಿ ಇದೇ ಮೊದಲಾದ ಹತ್ತು ಹಲವು ಪ್ರಶಸ್ತಿಗಳಿಂದ ಪುರಸ್ಕೃತಗೊಂಡಿದ್ದರು.ಇವರ ಅಗಲುವಿಕೆಯಿಂದ ಸಮಾಜಕ್ಕೆ ಅಪಾರ ನಷ್ಟವಾಗಿದೆ.

ಬೆಳ್ತಂಗಡಿ ಜೈನ ಮಿಲನ್‌ನ ಅಧ್ಯಕ್ಷರು ಮತ್ತು ಸರ್ವ ಸದಸ್ಯರ ಪರವಾಗಿ ನಿರ್ದೇಶಕ ಬಿ.ಸೋಮಶೇಖರ ಶೆಟ್ಟಿಯವರು ಅಗಲಿದ ಆತ್ಮಕ್ಕೆ ಶಾಂತಿಯನ್ನು ಬಯಸಿ ತಮ್ಮ ಸಂತಾಪದ ನುಡಿಯನ್ನು ತಿಳಿಸಿದರು.

LEAVE A REPLY

Please enter your comment!
Please enter your name here