Site icon Suddi Belthangady

ತೋಟತ್ತಾಡಿ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ತೋಟತ್ತಾಡಿ: ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆಯು ಸಂಘದ ನಿವೇಶನ ಕೃಷ್ಣ ನಗರದಲ್ಲಿ ನಡೆಯಿತು.

ಸಭೆಯಲ್ಲಿ ಮುಂದಿನ 2 ವರ್ಷದ ಅವಧಿಗೆ ಅಧ್ಯಕ್ಷರಾಗಿ ಗೋಪಾಲಕೃಷ್ಣ ಗೌಡ ಮಡೀರು, ಕಾರ್ಯದರ್ಶಿಯಾಗಿ ರೋಹಿತ್ ಗೌಡ ಕಜೆ, ಕೋಶಾಧಿಕಾರಿಯಾಗಿ ಪ್ರಮೋದ್ ಗೋಳಿದಡಿ, ಉಪಾಧ್ಯಕ್ಷರುಗಳಾಗಿ ದಿನೇಶ್ ಗೌಡ ದೇವಸ್ಯ ಮತ್ತು ಎಲ್ಯಣ್ನ ಗೌಡ ಅರ್ಬಿ, ವೆಂಕಟರಮಣ ಗೌಡ ಬಾಯಿತ್ಯಾರು, ಜೊತೆ ಕಾರ್ಯದರ್ಶಿ ಜಯಚಂದ್ರ ಬಾಯಿತ್ಯಾರು, ಮಹಿಳಾ ವೇದಿಕೆ ಅಧ್ಯಕ್ಷರಾಗಿ ರಶ್ಮಿ ದಿನೇಶ್ ಗೌಡ ದೇವಸ್ಯ ಕಾರ್ಯದರ್ಶಿಯಾಗಿ ಪ್ರಜ್ಞಾ ಗೋಳಿದಡಿ, ಯುವ ವೇದಿಕೆ ಅಧ್ಯಕ್ಷರಾಗಿ ನವೀನ್ ಗೌಡ ಬಾಯಿತ್ಯಾರು, ಕಾರ್ಯದರ್ಶಿಯಾಗಿ ನಿತೇಶ್ ಗೌಡ ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಪ್ರಸಾದ್ ಗೌಡ ಬಳ್ಳಿ, ಶಶಿಧರ ಗೌಡ ಪಿತ್ತಿಲು, ರಮೆಶ್ ಗೌಡ ಹಳೆಕಕ್ಕಿಂಜೆ, ಕೀರ್ತನ್ ಅರ್ತಿದಡಿ, ವಿಜಯ ಗೌಡ ಅಗರಿ ಆಯ್ಕೆ ಮಾಡಲಾಯಿತು.

ಈ ಸಂಧರ್ಭದಲ್ಲಿ ತಾಲೂಕು ಸಂಘದ ಕಾರ್ಯದರ್ಶಿ ಗಣೇಶ್ ಗೌಡ ಕಡಿರುದ್ಯಾವರ,ನಿಕಟಪೂರ್ವ ಕಾರ್ಯದರ್ಶಿ ಮೋಹನ ಗೌಡ ಕೊಯ್ಯೂರು, ನಿಕಟಪೂರ್ವ ನಿರ್ದೇಶಕರಾದ ಆನಂದ ಗೌಡ ಉಜಿರೆ, ತಾಲೂಕು ಯುವ ವೇದಿಕೆ ಅಧ್ಯಕ್ಷರಾದ ಚಂದ್ರಕಾಂತ್ ನಿಡ್ಡಾಜೆ, ತಾಲೂಕು ಮಹಿಳಾ ವೇದಿಕೆ ಅಧ್ಯಕ್ಷೆ ಗೀತಾ ರಾಮಣ್ಣ ಗೌಡ ಕೊಯ್ಯೂರು, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳಾದ ಸುರೇಶ್ ಕೌಡಂಗೆ, ಗೋಪಾಲಕೃಷ್ಣ ಜಿ.ಕೆ ಉಜಿರೆ ಉಪಸ್ಥಿತರಿದ್ದರು.

Exit mobile version