Site icon Suddi Belthangady

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ- ಆಮಂತ್ರಣ ಪತ್ರ ಬಿಡುಗಡೆ

ಉಜಿರೆ: ಮಂಗಳೂರಿನಲ್ಲಿ ಪುರಭವನದಲ್ಲಿ ಮಾ.23 ಮತ್ತು 24ರಂದು ನಡೆಯಲಿರುವ ದ.ಕ ಜಿಲ್ಲಾ 26ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರವನ್ನು ಮಾ.14ರಂದು ಧರ್ಮಸ್ಥಳದಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ.ಶ್ರೀನಾಥ್, ಬೆಳ್ತಂಗಡಿ ತಾಲ್ಲೂಕು ಘಟಕದ ಅಧ್ಯಕ್ಷ ಯದುಪತಿ ಗೌಡ, ನಾಗಣ್ಣ, ಡಿ.ಎ., ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್‌. ಮಂಜುನಾಥ, ನಿವೃತ್ತ ಪ್ರಾಂಶುಪಾಲ ಕೃಷ್ಣಪ್ಪ ಪೂಜಾರಿ, ಡಾ.ರಾಜಶೇಖ‌ರ್ ಹಳೇಮನೆ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್‌, ಅರವಿಂದ ಕಾರಂತ್ ಮೊದಲಾದವರು ಉಪಸ್ಥಿತರಿದ್ದರು.

Exit mobile version