Site icon Suddi Belthangady

ಉಜಿರೆ: ಎಸ್.ಡಿ.ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಎಸ್ ಡಿ ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಆಶ್ರಯದಲ್ಲಿ ಮಂಗಳೂರು ರೆಡ್ ಕ್ರಾಸ್ ರಕ್ತ ನಿಧಿ ಘಟಕದಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಯಿತು.

ಈ ಶಿಬಿರದ ಅಧ್ಯಕ್ಷತೆಯನ್ನು ಎಸ್.ಡಿ.ಎಂ ಪಾಲಿಟೆಕ್ನಿಕ್ ಕಾಲೇಜ್ ನ ಪ್ರಾಂಶುಪಾಲ ಸಂತೋಷ್ ಇವರು ವಹಿಸಿದ್ದರು.

ಹಾಗೂ ಮುಖ್ಯ ಅಥಿತಿಗಳಾಗಿ ಸಾತ್ವಿಕ್ ಜೈನ್ ಉದ್ಘಾಟಿಸಿ, ರಕ್ತದಾನದ ಮಹತ್ವವನ್ನು ವಿವರಿಸಿದರು.

ಈ ಸಮಾರಂಭದಲ್ಲಿ ಎಸ್.ಡಿ.ಎಂ ಆಸ್ಪತ್ರೆಯ ಪ್ರಯೋಗಾಲಯದ ಅಧಿಕಾರಿ ಶಿತಿಕಂಠ ಭಟ್‌, ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಮಂಗಳೂರಿನ ಸಂಯೋಜಕ ಪ್ರವೀಣ್ ಕುಮಾರ್, ಯುವ ರೆಡ್ ಕ್ರಾಸ್ ಘಟಕ ಯೋಜನಾಧಿಕಾರಿ ಅವನೀಶ್ ಪಿ.,ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿ ಪ್ರಕಾಶ್ ಹಾಗೂ ಎಸ್.ಡಿ.ಎಂ ಪಾಲಿಟೆಕ್ನಿಕ್ ಕಾಲೇಜ್ ನ ಭೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Exit mobile version