Site icon Suddi Belthangady

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಬಡಗಕಾರಂದೂರು ಹಿ.ಪ್ರಾ.ಶಾಲೆಗೆ ರಸ್ತೆ ಸುರಕ್ಷತಾ ಬ್ಯಾರಿಕೇಡ್ ನ ಕೊಡುಗೆ

ಅಳದಂಗಡಿ: ಸ.ಉ.ಹಿ.ಪ್ರಾ ಶಾಲೆ ಬಡಗಕಾರಂದೂರು ಇಲ್ಲಿನ ಎಸ್ ಡಿ ಎಂ ಸಿ ಯ ಮನವಿಗೆ ಸ್ಪಂದಿಸಿದ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಶಾಲಾ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ರಸ್ತೆ ಸುರಕ್ಷತಾ ಬ್ಯಾರಿಕೇಡ್ ನ್ನು ಕೊಡುಗೆಯಾಗಿ ನೀಡಿದೆ.

ಮಾ.11ರಂದು ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಉಪಾಧ್ಯಕ್ಷ ಜನಾರ್ಧನ ಪೂಜಾರಿ ಕೊಡಂಗೆ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತ ಮೊಕ್ತೇಸರ ಶಿವಪ್ರಸಾದ ಅಜಿಲ, ಶಾಲಾಭಿವೃದ್ಧಿ/ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಶ್ರೀನಿವಾಸ ರಾವ್ ದೋರಿಂಜ, ಉಪಾಧ್ಯಕ್ಷ ಆನಂದ ಪೂಜಾರಿ, ಪೂರ್ವಾಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು, ಎಸ್ ಡಿ ಎಂ ಸಿ ಸದಸ್ಯರಾದ ಶಶಿಕಾಂತ್ ನಾಯಕ್, ಸಹಕಾರ ಸಂಘದ ಕಾರ್ಯನಿರ್ವಾಹಕ ಮೀರಾ,ಸಿಬ್ಬಂದಿ ವರ್ಗ, ಎಸ್ ಡಿ ಎಂ ಸಿ ಸದಸ್ಯರುಗಳು, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯ ಸುರೇಶ್ ಸ್ವಾಗತಿಸಿದರು, ಶಿಕ್ಷಕಿ ಮಂಗಳಾ ಕೆ ಕಾರ್ಯಕ್ರಮ ನಿರೂಪಿಸಿ, ಸರೋಜಾ ಧನ್ಯವಾದವಿತ್ತರು.

Exit mobile version