ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಪ್ರದಾನ

0

ಉಜಿರೆ: ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ ಮೋಹನ್ ಕುಮಾರ್ ಅವರಿಗೆ ಈ ಸಾಲಿನ ಜಗತ್ ಪ್ರಸಿದ್ದ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಮಂತ್ರಾಲಯ ಶ್ರೀ ಕ್ಷೇತ್ರದಲ್ಲಿ ಶ್ರೀಗಳಾದ ಡಾ.ಪರಮಪೂಜ್ಯ ಶ್ರೀಮತ್ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಾ.17ರಂದು ಪ್ರಶಸ್ತಿ ಪ್ರದಾನ ಮಾಡಲಾಯಿತು.

2019ರಲ್ಲಿ ಬೆಳ್ತಂಗಡಿ ತಾಲೂಕ್ ನೆರೆ ಅಪ್ಪಳಿಸಿ ಕೊಳಂಬೆ ಭಾಗದ ಜನರ ಆಸ್ತಿ ಪಾಸ್ತಿಗಳು ನಷ್ಟಗೊಂಡಾಗ ಅವರ ನೆರವಿಗೆ ನಿಂತವರು ಮೋಹನ್ ಕುಮಾರ್ ರವರು, ಆ ಸಂದರ್ಭದಲ್ಲಿ ಬದುಕು ಕಟ್ಟೋಣ ಬನ್ನಿ ತಂಡವನ್ನು ಕಟ್ಟಿಕೊಂಡು ಸಂತ್ರಸ್ತರಿಗೆ ನೆರವು ಒದಗಿಸಿ ಬದುಕು ಕಟ್ಟಿ ಕೊಟ್ಟವರು ಮೋಹನ್ ಕುಮಾರ್ ರವರು.

ನಂತರದ ದಿನಗಳಲ್ಲಿ ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಶಾಲೆಗಳನ್ನು ದತ್ತು ಸ್ವೀಕಾರ ಮಾಡಿ ಶಾಲೆಯ ಅಭಿವೃದ್ಧಿಗೆ ಸಹಕರಿಸುತ್ತಿರುವ ಮೋಹನ್ ಕುಮಾರ್ ರವರ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಭಾಜನರಾದರು.

LEAVE A REPLY

Please enter your comment!
Please enter your name here