Site icon Suddi Belthangady

ಕಕ್ಯಪದವು ಎಲ್‌.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪ.ಪೂ ವಿಭಾಗದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಕಕ್ಯಪದವು: ಎಲ್.ಸಿ.ಆರ್ ವಿದ್ಯಾಸಂಸ್ಥೆ ಇಲ್ಲಿನ ಪದವಿಪೂರ್ವ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಿದರು.

ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಕು.ವಿಜಯಾ ಕೆ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಸಂಸ್ಥೆಯ ಸಂಯೋಜಕ ಯಶವಂತ್ ಜಿ.ನಾಯಕ್ ಉಪಸ್ಥಿತರಿದ್ದು, ಧನತ್ಮಾಕ ಮಾತುಗಳಿಂದ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ವಿದ್ಯಾಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೊ ಅಧ್ಯಕ್ಷತೆ ವಹಿಸಿ ಪ್ರೇರಣಾತ್ಮಕ ಮಾತುಗಳಿಂದ ಶುಭಹಾರೈಸಿದರು.

ಪ್ರಥಮ ಪಿ.ಯು.ಸಿಯ ಮಹಮ್ಮದ್ ಸಾಬಿತ್ ಸ್ವಾಗತಿಸಿ, ಸಾನಿಬಾ ಹಾಗೂ ನಸೀಬಾ ಅಭಿಪ್ರಾಯ ವ್ಯಕ್ತಪಡಿಸಿ, ಆಯಿಷತ್ ರಾಫಿದಾ ವಂದಿಸಿ, ಮಶ್ರೂಫಾ ಹಾಗೂ ತಮ್ಸೀನಾ ಕಾರ್ಯಕ್ರಮ ನಿರೂಪಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿವಿಧ ಮನೋರಂಜನಾ ಆಟೋಟ ಸ್ಪರ್ಧೆಗಳನ್ನು ಆಯೋಜಿಸಿದರು.

Exit mobile version