ಲೋಕಸಭಾ ಚುನಾವಣೆ ಪ್ರಯುಕ್ತ ತಾಲೂಕು ಸಹಾಯಕ ಚುನಾವಣಾಧಿಕಾರಿ ಕೆಂಪೇಗೌಡ ಹೆಚ್ ರವರು ಗ್ರಾಮಗಳ ಮತಗಟ್ಟೆಗಳಿಗೆ ಭೇಟಿ

0

ಬೆಳ್ತಂಗಡಿ: ಲೋಕಸಭಾ ಚುನಾವಣೆ ಪ್ರಯುಕ್ತ ತಾಲೂಕು ಸಹಾಯಕ ಚುನಾವಣಾಧಿಕಾರಿ ಕೆಂಪೇಗೌಡ.ಹೆಚ್ ರವರು ಮಾಲಾಡಿ, ಸೋಣಂದೂರು, ಪಾರೆಂಕಿ, ಕುಕ್ಕಳ, ಕುವೆಟ್ಟು ಗ್ರಾಮಗಳ ಮತಗಟ್ಟೆಗಳಿಗೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ಮಾಡಿದರು.

ಮತದಾನ ಕಾರ್ಯದಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರ ವಹಿಸಲು ಸೂಚನೆ ನೀಡಿದರು.

ಸೆಕ್ಟರ್ ಅಧಿಕಾರಿ ಭುವನೇಶ್, ಗ್ರಾಮ ಆಡಳಿತ ಅಧಿಕಾರಿ ನಾರಾಯಣ ಕುಲಾಲ್, ಮತಗಟ್ಟೆ ಹಂತದ ಅಧಿಕಾರಿಗಳಾದ ಎಂ.ಗುಣಕರ ಹೆಗ್ಡೆ, ಯೋಗೀಶ್ ಹೆಗ್ಡೆ, ಮೋಹಿನಿ, ಶಾಂತಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here