Site icon Suddi Belthangady

ಬೆಳ್ತಂಗಡಿ: ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ನಿವೃತ್ತ ಕೆ.ಜಯಕೀರ್ತಿ ಜೈನ್ ರಿಗೆ ಸರಕಾರಿ ನೌಕರರ ಸಂಘದಿಂದ ಸನ್ಮಾನ

ಬೆಳ್ತಂಗಡಿ: ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ಏಕತಾ ಸೌಧದಲ್ಲಿ ಸಂಘದ ಅಧ್ಯಕ್ಷ ಜಯರಾಜ್ ಜೈನ್ ರವರ ಅಧ್ಯಕ್ಷತೆಯಲ್ಲಿ ಹಾಗೂ ಹಿರಿಯ ಅಧಿಕಾರಿಗಳು, ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಕೆ.ಜಯಕೀರ್ತಿ ಜೈನ್ ರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಚಂದ್ರಶೇಖರ್, ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಹೇಮಚಂದ್ರ, ತಾಲೂಕು ಶಿಕ್ಷಣಾಧಿಕಾರಿ ತಾರಕೇಸರಿ, ಆಡಳಿತ ಮುಖ್ಯ ಪಶು ವೈದ್ಯಾಧಿಕಾರಿ ಡಾ.ರವಿ ಕುಮಾರ್, ಕೃಷಿ ಅಧಿಕಾರಿ ಹಾಗೂ ಸಹಕಾರಿ ಸಂಘದ ಉಪಾಧ್ಯಕ್ಷ ಚಿದಾನಂದ ಎಸ್. ಹೂಗಾರ್, ಸಂಘದ ಕಾರ್ಯದರ್ಶಿ ಗಂಗಾರಾಣಿ ನಾ.ಜೋಶಿ, ಕೋಶಾಧಿಕಾರಿ ಮೇರಿ ಎನ್.ಜೆ., ಹಿರಿಯ ಉಪಾಧ್ಯಕ್ಷ ಆನಂದ ಡಿ., ಸಂಚಾಲಕ ಧರಣೇಂದ್ರ ಜೈನ್, ಉಪಾಧ್ಯಕ್ಷ ಸಿದ್ದೇಶ್ ಎ. ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು, ಸಹಕಾರಿ ಸಂಘದ ನಿರ್ದೇಶಕರು, ನಿವೃತ್ತ ಸರಕಾರಿ ನೌಕರರ ಸಂಘದ ಅಧ್ಯಕ್ಷ ವಿಠಲ ಶೆಟ್ಟಿ ಹಾಗೂ ಹಲವಾರು ವೃಂದ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದು ಗೌರವಿಸಿದರು. ಕಾರ್ಯಕ್ರಮವನ್ನು ಅಜಿತ್ ಕೊಕ್ರಾಡಿ ನಿರೂಪಿಸಿದರು.

Exit mobile version