Site icon Suddi Belthangady

ಬಡಗಕಾರಂದೂರು ಸ.ಹಿ.ಪ್ರಾ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ

ಬಡಗಕಾರಂದೂರು: ಸ.ಉ.ಹಿ.ಪ್ರಾ ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಶಾಲಾ ದತ್ತು ಸ್ವೀಕಾರಕರ್ತರಾದ ಶಿವಪ್ರಸಾದ ಅಜಿಲ, ಶಾಲಾ ವಿಧ್ಯಾನಿಧಿಗೆ ಕೈ ಜೋಡಿಸಿರುವ ಪೋಷಕರು, ಶಾಲಾ ಶಿಕ್ಷಕಿ ಮಂಗಳಾ ಕೆ ರವರ ಸಹಕಾರದೊಂದಿಗೆ ಸ.ಉ.ಹಿ.ಪ್ರಾ.ಶಾಲೆ ಬಡಗಕಾರಂದೂರು ಇಲ್ಲಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೊಡುಗೆಯಾಗಿ ನೀಡಲ್ಪಟ್ಟ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಿವಪ್ರಸಾದ ಅಜಿಲರವರು ಮಾ.11ರಂದು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ/ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಶ್ರೀನಿವಾಸ ರಾವ್ ದೋರಿಂಜ, ಉಪಾಧ್ಯಕ್ಷ ಆನಂದ ಪೂಜಾರಿ, ಪೂರ್ವಾಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು, ಎಸ್ ಡಿ ಎಂ ಸಿ ಸದಸ್ಯರಾದ ಶಶಿಕಾಂತ್ ನಾಯಕ್, ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಉಪಾಧ್ಯಕ್ಷ ಜನಾರ್ಧನ ಪೂಜಾರಿ ಕೊಡಂಗೆ, ಸಿಬ್ಬಂದಿ ವರ್ಗ, ಎಸ್ ಡಿ ಎಂ ಸಿ ಸದಸ್ಯರುಗಳು, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯ ಸುರೇಶ್ ರವರು ಸ್ವಾಗತಿಸಿದರು, ಶಿಕ್ಷಕಿ ಮಂಗಳಾ ಕೆ ಕಾರ್ಯಕ್ರಮ ನಿರೂಪಿಸಿ, ಸರೋಜಾ ಧನ್ಯವಾದವಿತ್ತರು.

Exit mobile version