Site icon Suddi Belthangady

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಜೂರು ಮಖಾಂ ಶರೀಫ್ ಉರೂಸ್ ಮುಂದೂಡಿಕೆ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಸರ್ವಧರ್ಮೀಯರ ಸಮನ್ವಯ ಕ್ಷೇತ್ರ ಕಾಜೂರು ಮಖಾಂ ಶರೀಫ್ ಉರೂಸ್ ದಿನಾಂಕವನ್ನು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬದಲಾಯಿಸಲಾಗಿದೆ.

ಏ.19 ರಿಂದ ಏ.28ರ ವರೆಗೆ ನಡೆಯಬೇಕಿದ್ದ ಉರೂಸ್ ಕಾರ್ಯಕ್ರಮವನ್ನು ಮೇ.3ರಿಂದ ಮೇ.12ರ ತನಕ ನಡೆಸಲು ತಿರ್ಮಾನಿಸಲಾಗಿದೆ.

ಲೋಕಸಭಾ ಚುನಾವಣೆ ಏ.26ರಂದು ನಿಗದಿಯಾಗಿರುವುದನ್ನು ಮನಗಂಡು ಕಾಜೂರು ಗೌರವಾಧ್ಯಕ್ಷ ಸಯ್ಯಿದ್ ಕುಂಬೋಳ್ ತಂಙಳ್, ಖಾಝಿ ಸಯ್ಯಿದ್ ಕೂರತ್ ತಂಙಳ್ ನಿರ್ದೇಶನದ ಮೇರೆಗೆ ಉರೂಸ್ ಸಮಿತಿ ತುರ್ತು ಸಭೆ ನಡೆಸಿ ದಿನಾಂಕ ಬದಲಾವಣೆಗೊಳಿಸಲಾಯಿತು.

ದ‌.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನೂ ಭೇಟಿ ಮಾಡಿ ಚರ್ಚಿಸಿದ ಉರೂಸ್ ಸಮಿತಿ ಪದಾಧಿಕಾರಿಗಳು ಈ ನಿರ್ಧಾರ ಪ್ರಕಟಿಸಿದರು.

Exit mobile version