Site icon Suddi Belthangady

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ- ಚಪ್ಪರ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಮೊದಲ ದಿನವಾದ ಇಂದು ದೇವಸ್ಥಾನದಲ್ಲಿ ಚಪ್ಪರ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ ನೆರವೇರಿತು.

ಚಪ್ಪರ ಉದ್ಘಾಟನೆಯನ್ನು ಯು.ಗೋಪಾಲಕೃಷ್ಣ ಗೌಡ, ವಳಂಬ್ರ ಆಲಂಗಾವು ಇವರು ನಡೆಸಿಕೊಟ್ಟರು.ಭಜನಾ ಕಾರ್ಯಕ್ರದ ಉದ್ಘಾಟನೆ ಮಧ್ವಾದೀಶ ವಿಠಲದಾಸ ನಾಮಾಂಕಿತ ಭಜನಾ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ರಾಮಕೃಷ್ಣ ಕಾಟುಕುಕ್ಕೆ ನೆರವೇರಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಅಧ್ಯಕ್ಷ ಬಿ.ಕೆ ಧನಂಜಯ ರಾವ್, ಕಾರ್ಯದರ್ಶಿ ದಾಸಪ್ಪ ಗೌಡ ಕಾಂಜಾನು, ಕೋಶಾಧಿಕಾರಿ ವಾಸುದೇವ ರಾವ್ ಕಕ್ಕೆನೇಜಿ, ಜೀರ್ಣೋದ್ಧಾರ ಸಮಿತಿಯ ಲೋಕೇಶ್ ರಾವ್, ಚಪ್ಪರ ಸಮಿತಿಯ ಸಂಚಾಲಕ ಕೇಶವ ಎಮ್.ಕೆ, ವ್ಯವಸ್ಥಾಪನಾ ಸಮಿತಿ ಆಡಳಿತಾಧಿಕಾರಿ ಮೋಹನ್ ಬಂಗೇರ, ಭಜನಾ ಸಮಿತಿಯ ಸಂಚಾಲಕ ಗಣೇಶ್ ಗೌಡ ಪಗರೆ, ಗೌರವ ಸಲಹೆಗಾರರಾದ ರಾಜು ದಿಡುಪೆ, ಆನಂದ ಆಚಾರ್ಯ ಹಾಗೂ ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಭಕ್ತರು ಉಪಸ್ಥಿತರಿದ್ದರು.

ಚಪ್ಪರ ಉದ್ಘಾಟನೆಯ ಧಾರ್ಮಿಕ ವಿಧಿವಿಧಾನ ದೇವಸ್ಥಾನದ ಅರ್ಚಕ ಸುನಿಲ್ ಭಟ್ ನೆರವೇರಿಸಿದರು.

Exit mobile version