ರೆಖ್ಯಾ: ತೋಟಕ್ಕೆ ಹೋಗಿದ್ದ ವೇಳೆ ಹಲ್ಲೆ- ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು

0

ರೆಖ್ಯಾ: ತಮ್ಮ ಭಾಗದ ತೋಟಕ್ಕೆ ಹೋಗಿದ್ದ ಸಮಯದಲ್ಲಿ ನನಗೆ ಗಂಗಾಧರ ಎಂಬವರು ಹಲ್ಲೆ ನಡೆಸಿದ್ದಾರೆ ಎಂದು ರೆಖ್ಯಾದ ಬೀಡು ನಿವಾಸಿ ಬಾಲಕೃಷ್ಣ ಗೌಡ ಅವರು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕೃಷಿ ಕೆಲಸ ಮಾಡಿ ಜೀವನ ನಡೆಸುತ್ತಿರುವ ನಾನು ತಮ್ಮ ಸುರೇಶ್ ಎಂಬವರಿಗೆ ರೆಖ್ಯ ಗ್ರಾಮದ ದೇವಸ ಎಂಬಲ್ಲಿರುವ ಸುಮಾರು 2 ಎಕರೆ ಜಾಗದಲ್ಲಿ ತಂದೆ-ತಾಯಿ, ತಮ್ಮ ಒಟ್ಟಿಗೆ ಹಳೆ ಮನೆಯಲ್ಲಿ ಇದ್ದೇವೆ.

ಇತ್ತೀಚಿಗೆ ಹೊಸಮನೆ ನಿರ್ಮಾಣದ ಕೆಲಸ ಆಗುತ್ತಿದ್ದು, ಈ ಬಗ್ಗೆ ನಾನು ನಿನ್ನೆ ದಿನ ರಾತ್ರಿ 10 ಗಂಟೆಗೆ ಮನೆಯ ಕೆಲಸದ ಬಗ್ಗೆ ಹೋದಾಗ, ತಮ್ಮನ ಜಾಗದ ಬದಿಯಲ್ಲಿ ಭವಾನಿ ಎಂಬವರು ಬೋರ್‌ವೆಲ್ ಕೊರೆಯುತ್ತಿದ್ದಾರೆ.

ಈ ಬಗ್ಗೆ ಅಲ್ಲಿಯ ಸ್ಥಳಿಯರು ಪಂ. ಸದಸ್ಯರಾದ ನಾಗೇಶ್ ಎಂಬುವರು, ಯಾಕೆ ಬೋರ್‌ವೆಲ್ ಕೊರೆಯುವುದು ಎಂದು ಅವರೊಳಗೆ ಮಾತುಕತೆಯಾಗುತ್ತಿತ್ತು.

ಆ ಸಮಯ ನಾನು ಯಾಕೆ ಮಾತನಾಡುವುದು ಅವರು ಪಾಪದವರು ಬೋರ್‌ವೆಲ್ ತೆಗೆಯಲಿ ಎಂದು ಹೇಳಿದಾಗ ಕೋಪಗೊಂಡ ಗಂಗಾಧರ ಬಂದು, ತನಗೆ ಅವಾಚ್ಯ ಶಬ್ದಗಳಿಂದ ಬೈದು, ಕೈಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ದೂರು ಸ್ವೀಕರಿಸಿದ್ದಾರೆ.

LEAVE A REPLY

Please enter your comment!
Please enter your name here