ತುಮಕೂರಿನಲ್ಲಿ ಬೆಳ್ತಂಗಡಿ ಮೂಲದ ಕಾರಿನ ಮೇಲೆ ದುಷ್ಕರ್ಮಿಗಳಿಂದ ಬೆಂಕಿ: ಬೆಳ್ತಂಗಡಿಯ ಮೂವರು ಸಜೀವ ದಹನ

0

ಬೆಳ್ತಂಗಡಿ: ಬೆಳ್ತಂಗಡಿಯಿಂದ ಬಾಡಿಗೆ ಮಾಡಿಕೊಂಡು ಹೋಗಿದ್ದ ಮೂವರು ಇದ್ದ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿ ಕೊಲೆ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯಲ್ಲಿ ಬೆಳ್ತಂಗಡಿ ತಾಲೂಕಿನ ಮದಡ್ಕ ನಿವಾಸಿ ರಫೀಕ್ ಎಂಬವರಿಗೆ ಸೇರಿದ KA43 ರಿಜಿಸ್ಟ್ರೇಷನ್ ನಂಬರಿನ ಎಸ್ ಪ್ರೆಸ್ ಕಾರಿನಲ್ಲಿ ಸುಟ್ಟುಹೋಗಿರುವ ರೀತಿಯಲ್ಲಿ ಮಾ.22ರಂದು ಮೂವರ ಶವ ಪತ್ತೆಯಾಗಿದೆ.

ಕಾರಿನಲ್ಲಿದ್ದವರು ಬೆಳ್ತಂಗಡಿ ನಿವಾಸಿಗಳು: ಕಾರಿನಲ್ಲಿದ್ದವರನ್ನು ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್(45), ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56), ಶಿರ್ಲಾಲ್ ಗ್ರಾಮದ ನಿವಾಸಿ ಇಮ್ಮಿಯಾಜ್(34) ಎಂದು ಗುರುತಿಸಲಾಗಿದೆ.

ಮೂವರು ಯಾವ ಕಾರಣಕ್ಕೆ ತುಮಕೂರು ಕಡೆಗೆ ಹೋಗಿದ್ದರು ಎಂದು ಇನ್ನೂ ತಿಳಿದು ಬಂದಿಲ್ಲ. ಇನ್ನು ಕಾರಿನಲ್ಲಿ ಒಟ್ಟು ಐದು ಜನ ಇದ್ದರು ಇಬ್ಬರು ನಾಪತ್ತೆಯಾಗಿದ್ದಾರೆ, ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.ಈ ಬಗ್ಗೆ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಎಸ್ಪಿ ಅಶೋಕ್ ಕೆವಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here