Site icon Suddi Belthangady

ದ.ಕ ಲೋಕಸಭಾ ಕ್ಷೇತ್ರ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ ಉಪಸ್ಥಿತಿಯಲ್ಲಿ ನಾರಾವಿ-ಅಳದಂಗಡಿ ಮಹಾ ಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ

ಬೆಳ್ತಂಗಡಿ: ನಾರಾವಿ-ಅಳದಂಗಡಿ ಮಹಾಶಕ್ತಿಕೇಂದ್ರದ ಕಾರ್ಯಕರ್ತರ ಸಭೆ ಮಾ.24ರಂದು ಶ್ರೀ ವಿನಾಯಕ ಭಜನಾ ಮಂದಿರ ಅಂಡಿಂಜೆಯಲ್ಲಿ ನಡೆಯಿತು.

ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ ಸಭೆಯಲ್ಲಿ ಭಾಗಿಯಾಗಿ ಮಾತನಾಡಿ ತುಳುನಾಡಿನ ದ.ಕ. ಸಂಘಟನಾತ್ಮಕ ಜಿಲ್ಲೆಯಾಗಿದೆ. ದೈವ ದೇವರುಗಳ ಹಾಗೂ ಕಾರ್ಯಕರ್ತರ ಆಶೀರ್ವಾದದಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಉತ್ತಮ ಆಡಳಿತ. ಜನರು ಮೇಲೆ ಪ್ರಾಮಾಣಿಕವಾದ ಕಾಳಜಿಯನ್ನು ತೋರಿದ್ದಾರೆ ಎಂದರು.

ಶಾಸಕ ಹರೀಶ್ ಪೂಂಜ , ಹರೀಶ್ ಪೂಂಜ, ವಿ.ಪ.ಸದಸ್ಯ ಪ್ರತಾಪ್ ಸಿಂಹ ನಾಯಕ್, ಹರಿಕೃಷ್ಣ ಬಂಟ್ವಾಳ, ಜಿಲ್ಲಾ ಉಪಾಧ್ಯಕ್ಷ ಜಯಂತ ಕೋಟ್ಯಾನ್, ಮಂಡಲ ಅಧ್ಯಕ್ಷ ಶ್ರೀನಿವಾಸನ್ ರಾವ್, ನಾರಾವಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ನೇಮಯ್ಯ ಕುಲಾಲ್ , ಪ್ರಮುಖರಾದ ಶಶಿರಾಜ್ ಶೆಟ್ಟಿ, ಗಣೇಶ್ ನಾವೂರು, ಸುಂದರ ಹೆಗ್ಡೆ, ರಾಜೇಶ್ ಮುಡೂಕೋಡಿ, ಪ್ರಧಾನ ಕಾರ್ಯದರ್ಶಿ ಅಭಿಜಿತ್ ಜೈನ್, ಅಳದಂಗಡಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ವಿಶ್ವನಾಥ ಹೊಳ್ಳ ಮತ್ತು ಪ್ರಧಾನ ಕಾರ್ಯದರ್ಶಿ ಮಾಧವ ಶಿರ್ಲಾಲು, ಸೀತಾರಾಮ ಬೆಳಾಲು ಸಹಿತ ಪ್ರಮುಖರು ಉಪಸ್ಥಿತರಿದ್ದರು.

Exit mobile version