ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟಯೋಧ ಏಕನಾಥ ಶೆಟ್ಟಿ ಪುತ್ಥಳಿಗೆ ಗೌರವಾರ್ಪಣೆ

0

ಬೆಳ್ತಂಗಡಿ: ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟರವರ ಮಾ.24 ರಂದು ಗುರುವಾಯನಕೆರೆ ಹವ್ಯಕ ಭವನ ಸಮೀಪವಿರುವ ಏಕನಾಥ ಶೆಟ್ಟಿ ನಿವಾಸಕ್ಕೆ ಭೇಟಿ ನಿವೃತ್ತ ಹುತಾತ್ಮ ಯೋಧ ಕೆದಂಬಾಡಿ ರಾಮಯ್ಯ ಗೌಡ ಶೌರ್ಯ ಪ್ರಶಸ್ತಿ ಪುರಸ್ಕೃತ ಸುಬೇದಾರ್ ಏಕನಾಥ್ ಶೆಟ್ಟಿ ಅವರ ಭೇಟಿ ನೀಡಿ ನಮನ ಸಲ್ಲಿಸಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಸುಬೇದಾರ್ ಏಕನಾಥ್ ಶೆಟ್ಟಿ ಅವರ ಸ್ಮಾರಕಕ್ಕೆ ಭೇಟಿ ನೀಡಿ ಸುಬೇದಾರ್ ಏಕನಾಥ ಶೆಟ್ಟಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು ಪುಷ್ಪಾ ನಮನ ಗೈದರು. ಇದೇ ವೇಳೆ ಏಕನಾಥ್ ಶೆಟ್ಟಿಯವರ ಪತ್ನಿ ಶಿಕ್ಷಕಿ ಜಯಂತಿ ಶೆಟ್ಟಿಯವರೊಂದಿಗೆ ಸೈನ್ಯದ ಬಗ್ಗೆ, ಏಕನಾಥ್ ಶೆಟ್ಟಿಯವರ ಸೇವೆಯ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಭಾಜಪಾ ಜಿಲ್ಲಾ ಉಪಾಧ್ಯಕ್ಷ ಜಯಂತ ಕೋಟ್ಯಾನ್ , ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಸುದ್ದಿ ಬಿಡುಗಡೆಯ ಎಡಿಟಿಂಗ್ ವಿಭಾಗದ ಮುಖ್ಯಸ್ಥ ಪುಷ್ಪರಾಜ್ ಶೆಟ್ಟಿ, ಮಾಜಿ ಸೈನಿಕರ ಸಂಘದ ಪ್ರಮುಖರು ಹಾಗೂ ಬಿಜೆಪಿಯ ಪ್ರಮುಖರು ಉಪಸ್ಥಿತರಿದ್ದರು.

ತುಳುನಾಡಿನ ಹೆಮ್ಮೆಯ ಯೋಧ ಕೆದಂಬಾಡಿ ರಾಮಯ್ಯ ಗೌಡ ಶೌರ್ಯ ಪ್ರಶಸ್ತಿ ಪುರಸ್ಕೃತ ಬೆಳ್ತಂಗಡಿಯ ಸುಬೇದಾರ್ ಏಕನಾಥ್ ಶೆಟ್ಟಿ ಅವರ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು.

LEAVE A REPLY

Please enter your comment!
Please enter your name here