ಬೆಳ್ತಂಗಡಿ ಸಂತ ಲಾರೆನ್ಸರ ಪ್ರದಾನ ದೇವಾಲಯದಲ್ಲಿ ಗರಿಗಳ ಹಬ್ಬ ಆಚರಣೆ

0

ಬೆಳ್ತಂಗಡಿ: ಸಂತ ಲಾರೆನ್ಸರ ಪ್ರದಾನ ದೇವಾಲಯದಲ್ಲಿ ಗರಿಗಳ ಹಬ್ಬವನ್ನು ಮಾ.24ರಂದು ಆಚರಿಸಲಾಯಿತು.

ಜಯಗೋಷಗಳೊಂದಿಗೆನ ಏಸುಕ್ರಿಸ್ತರ ಜೆರುಸಲೇಮ್ ಪ್ರವೇಶವನ್ನು ಗರಿಗಳ ಹಬ್ಬವೆಂದು ಆಚರಿಸಲಾಗುತ್ತದೆ.ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಧ್ಯಕ್ಷರಾದ ಅತಿ ವಂದನೀಯ ಮುಕ್ಕುಯಿಯವರು ಆಚರಣೆಗಳಿಗೆ ಮುಖ್ಯ ಕಾರ್ಮಿಕರಾಗಿದ್ದರು.

ವಂದನೀಯ ಫಾದರ್ ಟೋಮಿ ಮಟ್ಟಂ, ವಂದನೀಯ ಫಾದರ್ ಲಾರೆನ್ಸ್ ಫೋನೊಲಿಲ್, ವಂದನೀಯ ಫಾದರ್ ಕುರಿಯಕೋಸ್ ಧರ್ಮ ಭಗನಿಯರು ಹಾಗೂ ವಿಶ್ವಾಸಿಗಳು ಹಬ್ಬದಲ್ಲಿ ಪಾಲ್ಗೊಂಡರು. ಕ್ರಿಸ್ತರ ಚರಿತ್ರೆ ಪ್ರವೇಶವು ಅವರ ಸಹನ ಹಾಗೂ ಶಿಲುಬೆ ಮರಣದ ಮನ್ನುಡಿ. ರಾಜಕೀಯವಾದ ಜೆರುಸಲೇಮ್ ಪ್ರವೇಶ ಕ್ರಿಸ್ತರ ಸಹನೆ, ಮರಣ ಹಾಗೂ ಉದ್ಯಾನದ ಕಡೆಗಿನ ದಾರಿಯ ಆರಂಭ.ಜಯ ಘೋಷ ಹಾಡಿದ ಅದೇ ಜನರು ಅವರನ್ನು ಕೊಲ್ಲಲು ಅಧಿಕಾರಿಗಳನ್ನು ಒತ್ತಾಯಿಸುತ್ತಾರೆ.

ಅದೇ ಜನರ ಪಾಪ ಪರಿಹಾರಕ್ಕಾಗಿ ಏಸುಕ್ರಿಸ್ತರು ಶಿಲುಬೆಗೇರಿ ಮರಣ ಹೊಂದುವರು.ಇದು ಕ್ರೈಸ್ತ ಬಾಂಧವರಿಗೆ ಪವಿತ್ರ ವಾರ.ಯೇಸು ಕ್ರಿಸ್ತನ ರಾಜಕೀಯ ಜೆರುಸಲೇಮ್ ಪ್ರವೇಶದಿಂದ ಈಸ್ಟರ್ ಆದಿತ್ಯವಾರದ ತನಕಿನ ದಿನಗಳು ಕ್ಷಮೆಯ ಕರುಣೆಯ ದೇವರ ಪ್ರೀತಿಯನ್ನು ಮನುಕುಲಕ್ಕೆ ತಿಳಿಯಪಡಿಸಿದ ದಿನಗಳಾಗಿವೆ.

ಯೇಸುಕ್ರಿಸ್ತರನ್ನು ಜೆರುಸಲೇಮ್ ನಗರಕ್ಕೆ ಒತ್ತುಹೊಯ್ದ ಕತ್ತೆಯಂತೆ ಏಸುಕ್ರಿಸ್ತರ ಸಂದೇಶವನ್ನು ಲೋಕಕ್ಕೆ ಸಾರಲು ಈ ಹಬ್ಬವು ಕರೆ ನೀಡುತ್ತದೆ.

LEAVE A REPLY

Please enter your comment!
Please enter your name here