ಬೆಳ್ತಂಗಡಿ ತಾಲೂಕು ಭಾರತೀಯ ಜನತಾ ಪಕ್ಷ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಆಯ್ಕೆಯಾದ ಸೇಬಾಷ್ಟಿಯನ್ ಪಿ.ಸಿ ರವರಿಗೆ ಬೆಳ್ತಂಗಡಿ ಕೆ.ಎಸ್.ಎಂ.ಸಿ.ಎ ವತಿಯಿಂದ ಅಭಿನಂದನೆ

0

ಬೆಳ್ತಂಗಡಿ :ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ತಾಲೂಕು ಅಲ್ಪಸಂಖ್ಯಾತ ಮೋರ್ಚಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸೇಬಾಷ್ಟಿಯನ್ ಪಿ ಸಿ ಯವರಿಗೆ ಬೆಳ್ತಂಗಡಿ ಧರ್ಮಪ್ರಾಂತ್ಯದ ಕರ್ನಾಟಕ ಸೀರೋ ಮಲಬಾರ್ ಕ್ಯಾಥೋಲಿಕ್ ಅಸೊಸಿಯೇಷನ್ ಸಂಘಟನೆಯ ಪರವಾಗಿ ಅಭಿನಂದಿಸಲಾಯಿತು.ಸೇಬಾಷ್ಟಿಯನ್ ಪಿ.ಸಿ ಅವರು ಕೆ.ಎಸ್.ಎಂ.ಸಿ.ಎ ಬೆಳ್ತಂಗಡಿ ಧರ್ಮಪ್ರಾಂತ್ಯ ಇದರ ಕೇಂದ್ರ ಸಮಿತಿ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ತಮ್ಮ ಸೇವಾ ಅವಧಿಯಲ್ಲಿ ಬಹುಮುಖ ಚಟುವಟಿಕೆಗಳ ಮೂಲಕ ಹಲವಾರು ಸಾಮಾಜಿಕ, ಧಾರ್ಮಿಕ ಮತ್ತು·ಕ್ರೀಡಾ ಚಟುವಟಿಕೆಗಳ ಮುಖಾಂತರ ಓರ್ವ ಉತ್ತಮ ನಾಯಕ ಮತ್ತು ಸಂಘಟಕ ಎಂಬ ಹಿರಿಮೆ ಪಡೆದಿದ್ದಾರೆ. ವಿನ್ಸೆಂಟ್ ಡಿ ಪೌಲ್ ಸೊಸೈಟಿಯ ಧರ್ಮ ಪ್ರಾಂತ್ಯ ಮಟ್ಟದ ಪದಾಧಿಕಾರಿಯಾಗಿ ಹಾಗೂ ಕೆ.ಎಸ್.ಎಂ.ಸಿ.ಎ.ಪಿ ಆರ್ ಓ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಧರ್ಮಪ್ರಾಂತ್ಯ ರಜತ ಸಂಭ್ರಮದ ಸ್ವಾಗತ ಸಮಿತಿ, ಮತ್ತು ಆರ್ಥಿಕ ಸಮಿತಿಯಲ್ಲಿದ್ದು ಉತ್ತಮ ನಾಯಕತ್ವದ ಮುಕಾಂತರ ರಜತ ಸಂಭ್ರಮ ಯಶಸ್ವೀಗೊಳಿಸುವಲ್ಲಿ ಸೇಬಾಷ್ಟಿಯನ್ ಪಿ.ಸಿ ನೀರ್ಣಾಯಕ ಕೊಡುಗೆಯನ್ನು ನೀಡಿದ್ದಾರೆ.ಈ ಸಂದರ್ಭದಲ್ಲಿ ಕೆ.ಎಸ್.ಎಂ.ಸಿ.ಎ ಇದರ ಕೇಂದ್ರೀಯ ನಿರ್ದೇಶಕರು ಆಗಿರುವ ವಂದನಿಯ ಫಾ.ಶಾಜಿ ಮಾತ್ಯು ಅವರು ಸೇಬಾಷ್ಟಿಯನ್ ಪಿ ಸಿ ಅವರ ಹೊಸ ಜವಾಬ್ದಾರಿ ಸಮಾಜಕ್ಕೆ ಹೆಚ್ಚು ಸೇವೆ ನೀಡಲು ಒಂದು ಅವಕಾಶ ವಾಗಲಿ ಎಂದು ಹಾರೈಸಿದ್ದಾರೆ.

ತಾಲೂಕು ಉಪಾಧ್ಯಕ್ಷರಾಗಿ ಆಯ್ಕೆಯಾದ ಉಜಿರೆ ಕೆ.ಎಸ್.ಎಂ.ಸಿ.ಎ ಪ್ರಾಥಮಿಕ ಘಟಕದ ಅಧ್ಯಕ್ಷ ಜೋಬಿನ್ ಮುಳವನ ಮಾಚಾರು, ಹಾಗೂ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಪ್ರಿನ್ಸ್ ತೋಮಸ್ ತೋಟ್ಟತಾಡಿ ಇವರನ್ನು ಅಧ್ಯಕ್ಷರು ಬಿಟ್ಟಿ ನೆಡುನಿಲಂ, ಸೇಬಾಷ್ಟಿಯನ್ ಎಂ ಜೆ ಪ್ರದಾನ ಕಾರ್ಯದರ್ಶಿಗಳು, ಬೆನ್ನಿ ಕೋಲಮ್ಚೇರಿ ಉಪಾಧ್ಯಕ್ಷರು, ಜಿಮ್ಮಿ ಗುಂಡ್ಯ, ಜಾರ್ಜ್ ಟಿ ವಿ, ಅಲ್ಫೋನ್ಸ, ರರೀನಾ ಸಿಬಿ ಧರ್ಮಸ್ಥಳ ಕೇಂದ್ರ ಸಮಿತಿ ಸದಸ್ಯರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here