ಬೆಳ್ತಂಗಡಿ ಜೆಸಿಐ ಮಂಜುಶ್ರೀಯಲ್ಲಿ “EPS” ತರಬೇತಿ ಕಾರ್ಯಕ್ರಮ

0

ಬೆಳ್ತಂಗಡಿ: ಬೆಳ್ತಂಗಡಿ ಜೆಸಿಐ ಭವನದಲ್ಲಿ ನಡೆದ (EPS) effective Public speaking ತರಬೇತಿ ಕಾರ್ಯಕ್ರಮವನ್ನು ಬೆಳ್ತಂಗಡಿಯ ಮಾತೃಶ್ರೀ ಟೆಕ್ಸ್ ಟೈಲ್ಸ್ ಅಂಡ್ ರೆಡಿಮೇಡ್ ನ ಮಾಲಕ ಮೋಹನ್ ಸುವರ್ಣ ಉದ್ಘಾಟಿಸಿದರು.

ಮೈಟ್ (MITE) ಎಂಜಿನಿಯರಿಂಗ್ ಕಾಲೇಜು ಮೂಡಬಿದ್ರಿಯ ಉಪನ್ಯಾಸಕರು, ಜೆಸಿಐ ಬೆಳ್ತಂಗಡಿಯ ಅಧ್ಯಕ್ಷರು ಹಾಗೂ ಜೆಸಿಐ ಭಾರತದ ವಲಯ ತರಬೇತುದಾರಾದ ಜೆಸಿ ರಂಜಿತ್ ಎಚ್.ಡಿ. ತರಬೇತಿಯನ್ನು ನಡೆಸಿಕೊಟ್ಟರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಉಪಾಧ್ಯಕ್ಷ ಪ್ರೀತಮ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿ ಸ್ವಾಗತಿಸಿದರು.

ಕಾರ್ಯಕ್ರದಲ್ಲಿ ಜೆಸಿಐ ಭಾರತದ ವಲಯ 15ರ ಉಪಾಧ್ಯಕ್ಷ ಜೆಸಿ ಶಂಕರ್ ರಾವ್ ಅತಿಥಿಯಾಗಿ ಭಾಗವಹಿಸಿದರು.

ವೇದಿಕೆಯಲ್ಲಿ ಜೆಸಿಐ ಬೆಳ್ತಂಗಡಿ ಮಹಿಳಾ ಘಟಕದ ಸಂಯೋಜಕ ಶೃತಿ ರಂಜಿತ್, ಜೆಜೆಸಿ ಅಧ್ಯಕ್ಷ ಸಮನ್ವತ್ ಕುಮಾರ್, ಕಾರ್ಯಕ್ರಮದ ಸಂಯೋಜಕ ಜೆಸಿ ರಕ್ಷಿತಾ ಶೆಟ್ಟಿ ಉಪಸ್ಥಿತರಿದ್ದರು.ಕಾರ್ಯದರ್ಶಿ ಅನುದೀಪ್ ಜೈನ್ ವಂದಿಸಿದರು.

ವೇದಿಕೆ ಆಹ್ವಾನವನ್ನು ಪೂರ್ವ ಅಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ, ಜೆಸಿ ವಾಣಿಯನ್ನು ಶಿವಾನಿ ಉದ್ಘೋಷಿಸಿದರು, ಉದ್ಘಾಟಕರ ಪರಿಚಯವನ್ನು ನಮ್ರತಾ, ತರಬೇತುದಾರರ ಪರಿಚಯವನ್ನು ಮದುಶ್ರೀ ನಡೆಸಿಕೊಟ್ಟರು.

ಘಟಕದ ಪೂರ್ವಧ್ಯಕ್ಷರುಗಳಾದ ಜೆಸಿ ತುಕಾರಾಮ್, ನಾರಾಯಣ ಶೆಟ್ಟಿ, ಚಿದಾನಂದ ಇಡ್ಯಾ, ಸಂತೋಷ ಪಿ ಕೋಟ್ಯಾನ್, ಪ್ರಸಾದ್ ಬಿ ಸ್, ಉಪಾಧ್ಯಕ್ಷ ಶೈಲೇಶ್, ಸದಸ್ಯರಾದ ಜಿತೇಶ್, ರತ್ನಾಕರ ಹಾಗೂ ಜೆಜೆಸಿ ಸದಸ್ಯರು ಭಾಗವಹಿಸಿದರು.

LEAVE A REPLY

Please enter your comment!
Please enter your name here