ಉಜಿರೆ: ಪ್ರಗತಿ ಮಹಿಳಾ ಮಂಡಲ ಮಹಿಳಾ ದಿನಾಚರಣೆ ಹಾಗೂ ಸನ್ಮಾನ

0

ಉಜಿರೆ: ಉಜಿರೆಯ ಪ್ರಗತಿ ಮಹಿಳಾ ಮಂಡಲದ ವತಿಯಿಂದ ನಡೆದ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದ ವೈಟ್ ಲಿಪ್ಟರ್ ಹಾಗೂ ಬಾಡಿ ಬಿಲ್ಡರ್ ಉಜಿರೆಯ ಕು.ಶ್ರದ್ದಾ ನಾಯ್ಕ ಇವರನ್ನು ಸನ್ಮಾನಿಸಲಾಯಿತು.

ಕು.ಶ್ರದ್ದಾರವರು ಉಜಿರೆಯ ತೋಟಗಾರಿಕಾ ಇಲಾಖೆಯ ನಿವೃತ್ತ ಅಧಿಕಾರಿ ಸಂಜೀವ ನಾಯ್ಕ ಹಾಗೂ ಕೃಷಿ ಇಲಾಖೆಯ ಅಧಿಕಾರಿ ಶೈಲಜಾ ಇವರ ಪುತ್ರಿಯಾಗಿದ್ದು ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಗೊಳ್ಳುತ್ತಿರುವ ಪ್ರತಿಭಾನ್ವಿತ ಯುವ ಕ್ರೀಡಾಪಟುವಾಗಿರುತ್ತಾರೆ.

ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಅಧ್ಯಾಪಕಿ ಮನೋರಮಾ ತೋಳ್ಪಾಡಿತ್ತಾಯ, ಉಜಿರೆ ಬ್ಯಾಂಕ್ ಆಫ್ ಬರೋಡ ಶಾಖೆಯ ಸಂಧ್ಯಾ, ಉಜಿರೆ ಪ್ರಗತಿ ಮಹಿಳಾ ಮಂಡಲ ಅಧ್ಯಕ್ಷೆ ಜಯಶ್ರೀ ಪ್ರಕಾಶ್, ಕಾರ್ಯದರ್ಶಿ ಗಾಯತ್ರಿ ಶ್ರೀಧರ್, ಕೋಶಾಧಿಕಾರಿ ಪೂರ್ಣಿಮ ಸಂಜೀವ್ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಉಜಿರೆಯ ನಿವೃತ್ತ ಶುಶ್ರೂಷಕಿ ದೇವಮ್ಮ ಅವರನ್ನು ಅವರ ಸ್ವಗೃಹದಲ್ಲಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಸಂಘದ ಮಾರ್ಗದರ್ಶಕರಾಗಿದ್ದು ಇತ್ತೀಚಿಗೆ ದೈವಾಧೀನರಾದ ದಿ‌.ನಾ’ವುಜಿರೆ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಜಯಲಕ್ಷ್ಮಿನಾಗೇಶ್ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು.ಅಧ್ಯಕ್ಷೆ ಜಯಶ್ರೀ ಪ್ರಕಾಶ್ ಸ್ವಾಗತಿಸಿ, ಅನ್ನಪೂರ್ಣ ಪ್ರಕಾಶ್ ಕಾರ್ಯಕ್ರಮವನ್ನು ನಿರೂಪಿಸಿ, ನಳಿನಿ ಇಚ್ಚಿಲ ವಂದಿಸಿದರು.

LEAVE A REPLY

Please enter your comment!
Please enter your name here