ನೆರಿಯ: ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

0

ಬೆಳ್ತಂಗಡಿ: ನೆರಿಯ ಗ್ರಾಮದ ಅಂಬಟೆ ಮಲೆ ಎಂಬಲ್ಲಿ ಖಾಸಗಿ ಎಸ್ಟೇಟ್ ಒಂದರಲ್ಲಿ ಅಕ್ರಮವಾಗಿ ಕಡಿದು ಸಂಗ್ರಹಿಸಲಾಗಿದ್ದ ಮರ, ಕಟ್ಟಿಗೆ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ.

ಕಾಯಿದೂಪ -18.386 ಘನ ಮೀಟರ್ ಹಲಸು-1.353ಘ.ಮೀ., ಹೆಬ್ಬಲಸು-20.277ಘ.ಮೀ., ಚೇರೆ-0.836ಘ.ಮೀ., ಕಾಡು ಜಾತಿ 1.235, ಸಹಿತ ಒಟ್ಟು 42.114 ಘನ ಮೀಟರ್ ಮರ ಹಾಗೂ 15,000 ಘನ ಮೀಟರ್ ಕಟ್ಟಿಗೆ ವಶಪಡಿಸಿಕೊಳ್ಳಲಾಗಿದ್ದು ಇದರ ಒಟ್ಟು ಮೌಲ್ಯ 7,02,276ರೂ. ಎಂದು ಅಂದಾಜಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಾರೆಂಕಿ ಗ್ರಾಮದ ಕೊಲ್ಪೆದಬೈಲು ನಜೀರ್, ಚಿಬಿದ್ರೆ ಗ್ರಾಮದ ಮೊಹಮ್ಮದ್ ರಫೀಕ್, ಮಂಗಳೂರು ಬಂದರ್ ನ ಭರತ್ ಕುಮಾರ್ ಕೊಠಾರಿ ಹಾಗೂ ಎಸ್ಟೇಟ್ ಮ್ಯಾನೇಜರ್ ಗಂಡಿಬಾಗಿಲಿನ ವಿನು ಎಂಬವರನ್ನು ವಶಕ್ಕೆ ಪಡೆದು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.

ಎಸಿಎಫ್ ಶ್ರೀಧರ್ ಪಿ., ಬೆಳ್ತಂಗಡಿ ಆರ್ ಎಫ್ ಒ ಮೋಹನ್ ಕುಮಾರ್ ಬಿ.ಜಿ.,ಡಿ ಆರ್ ಎಫ್ ಒ ಯತೀಂದ್ರ ಹಾಗೂ ಸಂತೋಷ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here