Site icon Suddi Belthangady

ಜೆಸಿಐಯ ರಾಷ್ಟ್ರೀಯ ಉಪಾಧ್ಯಕ್ಷರಿಂದ ಬೆಳ್ತಂಗಡಿ ಜೆಸಿಐ ಗೆ ಮನ್ನಣೆ

ಬೆಳ್ತಂಗಡಿ: ಜೆಸಿಐ ಭಾರತದ ರಾಷ್ಟೀಯ ಉಪಾಧ್ಯಕ್ಷರ ಭೇಟಿ ಮಾ.24ರಂದು ವಲಯ 15ರ ಜೆಸಿಐ ಕಾಪು ಘಟಕದ ಆತಿಥ್ಯದಲ್ಲಿ ನಡೆಯಿತು.

ಜೆಸಿಐ ಬೆಳ್ತಂಗಡಿ ಘಟಕವು ನಡೆಸುತ್ತಿರುವ ವ್ಯಕ್ತಿತ್ವ ವಿಕಾಸನ ಮತ್ತು ಸಾಮಾಜಿಕ ಕಾರ್ಯಕ್ರಮಗಳನ್ನು ಗುರುತಿಸಿ ಹಾಗೂ ಜೆಸಿಐ ಭಾರತದ ಬೆಳವಣಿಗೆ ಹಾಗೂ ಅಭಿವೃದ್ಧಿ ವಿಭಾಗಕ್ಕೆ ನೀಡುತ್ತಿರುವ ಕೊಡುಗೆಯನ್ನು ಗಮನಿಸಿಕೊಂಡು ರಾಷ್ಟ್ರೀಯ ಉಪಾಧ್ಯಕ್ಷರಾದ ಜೆಸಿ ಹರ್ಷವರ್ಧನ್ ರೆಡ್ಡಿ ಬೆಳ್ತಂಗಡಿ ಘಟಕದ ಅಧ್ಯಕ್ಷ ರಂಜಿತ್ ಎಚ್ ಡಿ ಇವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ವಲಯ ಅಧ್ಯಕ್ಷ ಅಡ್ವೋಕೇಟ್ ಗಿರೀಶ್ ಎಸ್ ಪಿ, ಉಪಾಧ್ಯಕ್ಷ ಶಂಕರ್ ರಾವ್, ಬೆಳ್ತಂಗಡಿ ಘಟಕದ ಲೇಡಿ ಜೆಸಿ ಸಂಯೋಜಕರಾದ ಶ್ರುತಿ ರಂಜಿತ್, ಉಪಾಧ್ಯಕ್ಷ ಶೈಲೇಶ್ ಉಪಸ್ಥಿತರಿದ್ದರು.

Exit mobile version