ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0

ಬೆಳ್ತಂಗಡಿ: ಸುಮಾರು 17 ವರ್ಷಗಳಿಂದ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಂಟ್ವಾಳ ತಾಲೂಕು ಮಂಚಿ ಗ್ರಾಮದ ನಿವಾಸಿಯನ್ನು ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕಂಚಿಲ ಮನೆ ಕುಕ್ಕಾಜೆ ನಿವಾಸಿ ಅಬುಸಾಲಿ (41ವ) ಬಂಧಿತ ಆರೋಪಿ ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ: 189/2007 ಕಲಂ: 504,506,3ಕ್ಕೆ ಸಂಬಂಧಿಸಿದಂತೆ 17ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ಬೆಳ್ತಂಗಡಿಯಲ್ಲಿ ತಲೆಮರೆಸಿ ಕೊಂಡಿದ್ದಾತನನ್ನು ಮಾ.29ರಂದು, ಬಂಟ್ವಾಳ ನಗರ ಠಾಣಾ ಪೊಲೀಸ್‌ ಉಪ ನಿರೀಕ್ಷಿಕರಾದ ರಾಮಕೃಷ್ಣ ರವರು ಮತ್ತು ಹೆಚ್ ಸಿ ರಾಜೇಶ್ ಎಸ್, ಹೆಚ್ ಸಿ ಗಣೇಶ್ ಏನ್ ರವರುಗಳ ತಂಡ, ಬೆಳ್ತಂಗಡಿ ತಾಲೂಕಿನ ಸಂತೆಕಟ್ಟೆಯಲ್ಲಿ ದಸ್ತಗಿರಿ ಮಾಡಿ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರು ಪಡಿಸಿರುತ್ತಾರೆ.

LEAVE A REPLY

Please enter your comment!
Please enter your name here