ಗುಂಡೂರಿ ಸತ್ಯನಾರಾಯಣ ಪೂಜಾ ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

0

ವೇಣೂರು: ಶ್ರೀ ಸತ್ಯ ನಾರಾಯಣ ಭಜನಾ ಮಂದಿರ ಗುಂಡುರಿ ತುಂಬೇದಲೆಕ್ಕಿ ಇದರ ನೂತನವಾಗಿ ನಿರ್ಮಿಸಲಾಗಿರುವ ಶಿಲಾಮಯ ಶ್ರೀ ಸತ್ಯ ನಾರಾಯಣ ಪೂಜಾ ಮಂದಿರ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಯವರು ಮಂಜೂರು ಮಾಡಿದ ರೂಪಾಯಿ ಎರಡು ಲಕ್ಷ ದೇಣಿಗೆಯನ್ನು ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಯೋಜನಾಧಿಕಾರಿ ದಯಾನಂದ ಪೂಜಾರಿ ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಗೌರವ ಅಧ್ಯಕ್ಷ ಶಾಂತಿ ರಾಜ್, ಅಧ್ಯಕ್ಷ ಪಿ. ರಮೇಶ್ ಪೂಜಾರಿ, ಕೋಶಾಧಿಕಾರಿ ರಾಜು ಪೂಜಾರಿ, ಕಾರ್ಯದರ್ಶಿ ಸತೀಶ್ ಕುಲಾಲ್, ವಲಯ ಮೇಲ್ವಿಚಾರಕಿ ವೀಣಾ, ಸೇವಾ ಪ್ರತಿನಿಧಿ ಹರೀಶ್ ಒಕ್ಕೂಟದ ಅಧ್ಯಕ್ಷ ಸದಾನಂದ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here