ಎ.1-3: ಬೈಪಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿ ಧಾಮ ಸಂಪ್ರೋಕ್ಷಣೆ, ಪ್ರತಿಷ್ಠಾ ಮಹೋತ್ಸವ

0

ಬಂದಾರು: ಬೈಪಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಧಾಮ ಸಂಪ್ರೋಕ್ಷಣೆ ಮತ್ತು ನೂತನ ಏಕಶಿಲಾ ಮಾನಸ್ತಂಭೋಪರಿ ಚತುರ್ಮುಖ ಶ್ರೀ ಶಾಂತಿನಾಥ ತೀರ್ಥಂಕರರ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾ ಮಹೋತ್ಸವವು ಎ.1ರಿಂದ 3ರವರೆಗೆ ಕಾರ್ಕಳ ಶ್ರೀ ಜೈನ ಮಠದ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಹಾಗು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ  ಹೆಗ್ಗಡೆಯವರು ಮತ್ತು ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನ ಹಾಗು ಸಹಕಾರದೊಂದಿಗೆ ಜೈನ ಆಗಮೋಕ್ತ ವಿಧಿ ವಿಧಾನಗಳೊಂದಿಗೆ ನೆರವೇರಲಿರುವುದು.

ಹೊಂಬುಜ ಶ್ರೀ ಜೈನ ಮಠದ ಸ್ವಸ್ತಿಶ್ರೀ ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು, ಮೂಡಬಿದ್ರಿ ಶ್ರೀ ಜೈನ ಮಠದ ಸ್ವಸ್ತಿಶ್ರೀ ಡಾ.ಚಾರುಕೀರ್ತಿ ಭಟ್ಟಾರಕ ಪಂಡಿತಾ ಚಾರ್ಯವರ್ಯ  ಮಹಾಸ್ವಾಮಿಗಳು ಹಾಗು ಕನಕಗಿರಿ ಜೈನ ಮಠದ ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಪಾವನ ಸಾನ್ನಿಧ್ಯ ವಹಿಸಲಿದ್ದಾರೆ.

ನರಸಿಂಹರಾಜಪುರ ಶ್ರೀ ಸಿಂಹಗದ್ದೆ ಬಸ್ತಿಮಠದ ಸ್ವಸ್ತಿ ಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಮಾನಸ್ತಂಭದ ಪ್ರೇರಣೆ ಹಾಗು ಮಾರ್ಗದರ್ಶನ ನೀಡಲಿದ್ದಾರೆ.

ಸದ್ಧರ್ಮ ಬಂಧುಗಳು ಆಗಮಿಸಿ ಶ್ರೀ ಜಿನಗಂಗೋದಕವನ್ನು ಸ್ವೀಕರಿಸುವಂತೆ ಆಡಳಿತ ಮಂಡಳಿ ಹಾಗು ಪಂಚಕಲ್ಯಾಣ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.   

LEAVE A REPLY

Please enter your comment!
Please enter your name here