ಬಹುಜನ ಸಮಾಜ ಪಾರ್ಟಿ ಅಭ್ಯರ್ಥಿಯಾಗಿ ಕಾಂತಪ್ಪ ಅಲಂಗಾರ್ ಎ.3ರಂದು ನಾಮಪತ್ರ ಸಲ್ಲಿಕೆ- ಪತ್ರಿಕಾಗೋಷ್ಠಿ

0

ಬೆಳ್ತಂಗಡಿ: ದ.ಕ ಲೋಕಸಭಾ ಕ್ಷೇತ್ರದಿಂದ ಬಹುಜನ ಸಮಾಜ ಪಾರ್ಟಿ ಅಭ್ಯರ್ಥಿಯಾಗಿ ಬಿ ಎಸ್ ಪಿ ರಾಜ್ಯ ಕಾರ್ಯದರ್ಶಿ ಕಾಂತಪ್ಪ ಅಲಂಗಾರ್ ಎ.3ರಂದು ನಾಮ ಪತ್ರ ಸಲ್ಲಿಸಲಿದ್ದಾರೆ ಎಂದು ಬಿ ಎಸ್ ಪಿ ಜಿಲ್ಲಾ ಘಟಕದ ಅಧ್ಯಕ್ಷ ಗೋಪಾಲ ಮುತ್ತೂರು ಹೇಳಿದರು. ಅವರು ಮಾ.30ರಂದು ಬೆಳ್ತಂಗಡಿ ಸುವರ್ಣ ಸಂಕೀರ್ಣ ಸಪ್ತವರ್ಣ ಪಾರ್ಟಿ ಹಾಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಕೇಂದ್ರ ಬಿಜೆಪಿ ಮತ್ತು ರಾಜ್ಯದ ಕಾಂಗ್ರೆಸ್ ದುರಾಡಳಿತದ ವಿರುದ್ಧ ದೇಶ ವ್ಯಾಪ್ತಿ ಹೋರಾಟಕ್ಕೆ ಈ ಸ್ಪರ್ಧೆಯಾಗಿದೆ ಎಂದರು.

ಅಭ್ಯರ್ಥಿ ಕಾಂತಪ್ಪ ಅಲಂಗಾರ್ ಮಾತನಾಡಿ ಮೂಡಬಿದ್ರೆ ಅಲಂಗಾರ್ ನಿವಾಸಿಯಾಗಿದ್ದು ದಲಿತ, ಮತ್ತು ಹಿಂದುಳಿದ ವರ್ಗದ ಪರವಾಗಿ ಸಂಘಟನೆ ಮೂಲಕ ವಿವಿಧ ಹೋರಾಟದಲ್ಲಿ ಭಾಗವಹಿಸಿದ್ದು ಬಿ ಎಸ್ ಪಿ ನನ್ನನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ ತುಳುನಾಡಿನ ಮತದಾರ ಬಂಧುಗಳು ಮತ ನೀಡಿ ಗೆಲ್ಲಿಸ ಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿ ಎಸ್ ಪಿ ಜಿಲ್ಲಾ ಉಪಾಧ್ಯಕ್ಷ ಶಿವಪ್ಪ ಗಾರ್ಡಡಿ, ತಾಲೂಕು ಅಧ್ಯಕ್ಷ ಪಿ.ಎಸ್.ಶ್ರೀನಿವಾಸ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here