ಕನ್ಯಾಡಿ ಶ್ರೀ ಸದಾಶಿವೇಶ್ವರ ಭಜನಾ ಮಂಡಳಿ ವಾರ್ಷಿಕೋತ್ಸವ

0

ಕನ್ಯಾಡಿ1: ಶ್ರೀ ಸದಾಶಿವೇಶ್ವರ ಭಜನಾ ಮಂಡಳಿ ಕನ್ಯಾಡಿ1 ಇದರ 23ನೇ ವಾರ್ಷಿಕೋತ್ಸವದ ಪ್ರಯುಕ್ತ ಆಹ್ವಾನಿತ ಭಜನಾ ತಂಡಗಳಿಂದ ಏಕಕಾಲದಲ್ಲಿ ಭಜನಾ ಕಾರ್ಯಕ್ರಮ,ಗಣಹೋಮ , ಸಾಮೂಹಿಕ ಸತ್ಯಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಮಾ.30ರಂದು ನಡೆಯಿತು.

ಸಾಯಂಕಾಲ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಿತು,ಭಜನಾ ಕಾರ್ಯಕ್ರಮವನ್ನು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಉದ್ಘಾಟಿಸಿ ಮಾತನಾಡುತ್ತಾ ಪ್ರಸ್ತುತ ನಮ್ಮ ದೇಶದಲ್ಲಿ ವಿಶೇಷವಾಗಿ ನಮ್ಮ ಜಿಲ್ಲೆಯಲ್ಲಿ,ತಾಲೂಕಿನಲ್ಲಿ ಧಾರ್ಮಿಕ ಜಾಗೃತಿ ಆಗುತ್ತಿದೆ.

ಭಜನೆಯ ಮೂಲಕ ಗ್ರಾಮದ ಮಕ್ಕಳನ್ನು ಜನರನ್ನು ಸಂಘಟನೆ ಮಾಡಲು ಸಾಧ್ಯವಿದೆ.ಈ ಭಜನಾ ಮಂಡಳಿ ಇದೆ ರೀತಿ ಉತ್ತಮ ಧಾರ್ಮಿಕ ಕಾರ್ಯಕ್ರಮ ನಡೆಸಲು ದೇವರು ಆಶೀರ್ವದಿಸಲಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಅಧ್ಯಕ್ಷತೆಯನ್ನು ಸದಾಶಿವೇಶ್ವರ ಭಜನಾ ಮಂಡಳಿಯ ಅಧ್ಯಕ್ಷ ಅಶೋಕ ಶೆಟ್ಟಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಉಜಿರೆ ಲಕ್ಷ್ಮೀ ಗ್ರೂಪ್ ಮೋಹನ್ ಕುಮಾರ್, ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ, ಶ್ರೀ ಕ್ಷೇ.ಧ.ಗ್ರಾ.ಯೋ ಕನ್ಯಾಡಿ ಒಕ್ಕೂಟದ ಅಧ್ಯಕ್ಷ ಮೋಹನ ಗೌಡ ಉಪಸ್ಥಿತರಿದ್ದರು.ಕು.ಸೋನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

ಭಜನಾ ಮಂಡಳಿಯ ಸ್ಥಾಪಕಾಧ್ಯಕ್ಷ ಪವನ್ ಶೆಟ್ಟಿ ಸ್ವಾಗತಿಸಿ.ಸ್ಥಾಪಕ ಕಾರ್ಯದರ್ಶಿ ತನಿಯಪ್ಪ ಗೌಡ ಧನ್ಯವಾದವಿತ್ತರು ನಂತರ ವಿಠ್ಠಲ್ ನಾಯಕ್ ಕಲ್ಲಡ್ಕ ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here