ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ದಿ.ಶೇಖರ ಬಂಗೇರ ರಿಗೆ ನುಡಿನಮನ

0

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕ ಶೇಖರ ಬಂಗೇರರವರು ಅಪಘಾತದಲ್ಲಿ ದೈವದೀನರಾಗಿದ್ದು ಅವರ ಅಗಲಿದ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಮಾ.29ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ನುಡಿನಮನ ಸಲ್ಲಿಸಲಾಯಿತು.

ಹಾಗೂ ನೋವನ್ನು ಸಹಿಸುವ ಶಕ್ತಿಯನ್ನು ಕುಟುಂಬಸ್ಥರಿಗೆ ಭಗವಂತನು ಅನುಗ್ರಹಿಸಲಿ ಎಂದು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅದ್ಯಕ್ಷ ಎನ್ ಪದ್ಮನಾಭ ಮಾಣಿಂಜ, ಉಪಾದ್ಯಕ್ಷ ಭಗೀರಥ ಜಿ, ನಿರ್ದೇಶಕರಾದ ಸಂಜೀವ ಪೂಜಾರಿ, ತನುಜಾ ಶೇಖರ, ಕೆ.ಪಿ ದಿವಾಕರ, ಜಗದೀಶ್ಚಂದ್ರ ಡಿ.ಕೆ, ಗಂಗಾಧರ ಮಿತ್ತಮಾರು, ಚಂದ್ರಶೇಖರ, ಡಾ.ರಾಜರಾಮ್, ಆನಂದ ಪೂಜಾರಿ, ಕೆ.ಧರಣೇಂದ್ರ ಕುಮಾರ್, ಜಯವಿಕ್ರಮ ಪಿ, ಸಂಘದ ವಿಶೇಷಾಧಿಕಾರಿ ಎಂ.ಮೋನಪ್ಪ ಪೂಜಾರಿ ಕಂಡೆತ್ಯಾರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್ ಹಾಗೂ ಕೇಂದ್ರ ಕಚೇರಿ ವ್ಯವಸ್ಥಾಪಕ ಕೀರ್ತನ್ ಕುಮಾರ್, ಮಾರಟಾಧಿಕಾರಿ ಶಿವಪ್ರಕಾಶ್, ಆಮತರಿಕ ಲೆಕ್ಕಪರಿಶೋಧಕ ಶರತ್ ಕುಮಾರ್, ಬೆಳ್ತಂಗಡಿ ಶಾಖೆಯ ಶಾಖಾ ವ್ಯವಸ್ಥಾಪಕ ಪ್ರಶಾಂತ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here