ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ

0

ಬೆಳ್ತಂಗಡಿ: ಕೃಷಿಕ್ ಸರ್ವೋದಯ ಪೌಂಡೇಶನ್ ಬೆಂಗಳೂರು, ಹಾಸನ ಶಾಖಾ ವತಿಯಿಂದ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ತಲಾ ಹತ್ತು ಸಾವಿರ ರೂಪಾಯಿಗಳಂತೆ ಒಟ್ಟು ಐದು ಲಕ್ಷ ಹಾಗೂ ಒರ್ವ ವಿದ್ಯಾರ್ಥಿನಿಗೆ ಇಪ್ಪತ್ತು ಸಾವಿರ ರೂಪಾಯಿಗಳ ವಿದ್ಯಾರ್ಥಿ ವೇತನವನ್ನು ಕಾಲೇಜಿನಲ್ಲಿ ಮಾ.30ರಂದು ವಿತರಿಸಲಾಯಿತು.

ವಾಣಿ ಶಿಕ್ಷಣ ಸಂಸ್ಥೆಗಳ ಗೌರವಾಧ್ಯಕ್ಷ ಎಚ್ ಪದ್ಮ ಗೌಡ, ಅಧ್ಯಕ್ಷ ಕುಶಾಲಪ್ಪ ಗೌಡ, ಕಾರ್ಯದರ್ಶಿಗಳಾದ ಗಣೇಶ್ ಗೌಡ ಹಾಗೂ ಕೋಶಾಧಿಕಾರಿಗಳಾದ ಯುವರಾಜ್ ಅನಾರ್ ಇವರುಗಳು ವಿದ್ಯಾರ್ಥಿಗಳಿಗೆ ಚೆಕ್ ವಿತರಣೆ ಮಾಡಿದರು.

ಪ್ರತಿ ವರ್ಷ ಕಾಲೇಜಿನಲ್ಲಿ ವ್ಯಾಸಂಗ ಮಾಡುವ ಬಡ ಕೃಷಿಕ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿಗಳಾದ ಪ್ರಸಾದ್ ಕುಮಾರ್ ಹಾಗೂ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here