ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಹಾಯಧನ ವಿತರಣೆ

0

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಶ್ರೀ ಕೃಷ್ಣ ಸ್ವ-ಸಹಾಯ ಸಂಘದ ಯೋಗೀಶ್ ದೇವಾಡಿಗರ ತಂದೆಗೆ ಪಿತ್ತಕೋಶದ ಸಂಬಂಧಿ ಖಾಯಿಲೆಯ ಚಿಕಿತ್ಸೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ವಿಶೇಷವಾಗಿ ಪೂಜ್ಯ ಖಾವಂದರು ಮಂಜೂರು ಮಾಡಿರುವ ರೂ.25,000 ಮೊತ್ತದ ಮಂಜೂರಾತಿ ಪತ್ರ ಹಾಗೂ ಚೆಕ್ಕನ್ನು ಉಜಿರೆ ಎ ಒಕ್ಕೂಟದ ಅಧ್ಯಕ್ಷೆ ಲೀಲಾವತಿಯವರು ವಿತರಿಸಿದರು.

ಈ ಸಂದರ್ಭ ತಾಲೂಕು ಯೋಜನಾಧಿಕಾರಿ ಸುರೇಂದ್ರ, ತಾಲೂಕು ಕೃಷಿ ಅಧಿಕಾರಿ ರಾಮ್ ಕುಮಾರ್ ಮಾರ್ನಾಡ್, ಮೇಲ್ವಿಚಾರಕಿಯಾದ ವನಿತ ಹಾಗೂ ಒಕ್ಕೂಟದ ಪದಾಧಿಕಾರಿಯಾದ ದೇವರಾಜ್, ಸೇವಾ-ಪ್ರತಿನಿಧಿ ಪ್ರೇಮಲತಾ, ಪ್ರಮೀಳಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here