ಬೆಳ್ತಂಗಡಿ: ಅಕ್ರಮವಾಗಿ ಗೋ ಸಾಗಾಟ- ಆರೋಪಿಗಳ ಬಂಧನ

0

ಬೆಳ್ತಂಗಡಿ: ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ಪ್ರಕರಣವೊಂದನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿದ್ದು ಮೂರು ಜಾನುವಾರುಗಳನ್ನು ರಕ್ಷಿಸಲಾಗಿದ್ದು ವಾಹನವನ್ನು ವಶಪಡಿಸಿಕೊಂಡು ಇಬ್ಬರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಮಂಗಳವಾರ ನಗರದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಸ್ಕೂಟರ್‌ ಹಾಗೂ ಅದರ ಹಿಂದೆ ಹೋಗುತ್ತಿದ್ದ ಟಾಟಾ ಏಸ್ ವಾಹನವನ್ನು ಪೊಲೀಸರು ಪರಿಶೀಲನೆಗಾಗಿ ತಡೆದಾಗ ಎರಡೂ ವಾಹನಗಳನ್ನು ನಿಲ್ಕಿಸಿದ್ದು ಸ್ಕೂಟರ್ ಸವಾರ ಸ್ಥಳದಿಂದ ಓಡಿ ತಪ್ಪಿಸಿಕೊಂಡಿದ್ದಾನೆ.

ಟಾಟಾ ಏಸ್ ವಾಹನವನ್ನು ಪರಿಶೀಲಿಸಲಾಗಿ ಅದರಲ್ಲಿ ಮೂರು ಜಾನುವಾರುಗಳನ್ನು ಯಾವುದೇ ಪರವಾನಿಗೆ ಇಲ್ಲದೆ ಸಾಗಾಟ ಮಾಡುತ್ತಿರುವುದು ಕಂಡು ಬಂದ ಹಿನಲ್ಲೆಯಲ್ಲಿ ಟಾಟಾ ಏಸ್ ಚಾಲಕ ಎಚ್.ಎಸ್ ಮಧು ಎಂಬಾತನನ್ನು ವಶಕ್ಕೆ ಪಡೆದ ಪೊಲೀಸರು ಸ್ಕೂಟರ್ ಹಾಗೂ ಟಾಟಾ ಏಸ್ ವಾಹನವನ್ನೂ ಹಾಗೂ ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ.

ತಪ್ಪಿಸಿಕೊಂಡ ಆರೋಪಿ ಕಳಿಯ ಗ್ರಾಮದ ನಿವಾಸಿ ಹಂಜ ಹಾಗೂ ಟಾಟಾ ಏಸ್ ಚಾಲಕ ಮಧು ಅವರ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

LEAVE A REPLY

Please enter your comment!
Please enter your name here