ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವವು ಡಾ.ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಎ.13 ಮೇಷ ಸಂಕ್ರಮಣದಿಂದ ಮೊದಲ್ಗೊಂಡು ಎ.23ರ ವರೆಗೆ ವಿವಿಧ ಧಾರ್ಮಿಕ ಹಾಗು ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಎ.13 ಕ್ರೋಧಿ ಸಂವತ್ಸರದ ಮೇಷ ಸಂಕ್ರಮಣದಂದು ರಾತ್ರಿ ಧ್ವಜಾರೋಹಣ, ಎ.14ರಂದು ಸೌರಮಾನ (ವಿಷು)ಯುಗಾದಿ, ಧರ್ಮ ನೇಮ, ಎ.15ರಂದು ಅಣ್ಣಪ್ಪ ದೈವಗಳ ನೇಮ, ಶ್ರೀ ಮಂಜುನಾಥ ಸ್ವಾಮಿ ಉತ್ಸವ, ಎ.16ರಂದು ಶ್ರೀ ಮಂಜುನಾಥ ಸ್ವಾಮಿ ಉತ್ಸವ, ಎ.17ರಂದು ಬೈಗಿನ ಬಲಿ ಹೊರಡುವುದು, ಹೊಸಕಟ್ಟೆ ಉತ್ಸವ, ಎ.18ರಂದು ಕಂಚಿಮಾರುಕಟ್ಟೆ ಉತ್ಸವ, ಎ.19ರಂದು ಲಲಿತೋದ್ಯಾನವನಕಟ್ಟೆ ಉತ್ಸವ, ಎ.20ರಂದು ಕೆರೆಕಟ್ಟೆ ಉತ್ಸವ, ಎ.21ರಂದು ಗೌರಿಮಾರುಕಟ್ಟೆ ಉತ್ಸವ, ಚಂದ್ರಮಂಡಲ ರಥೋತ್ಸವ, ಎ.22ರಂದು ರಾತ್ರಿ ಶ್ರೀ ಮನ್ಮಹಾರಥೋತ್ಸವ, ಎ.23ರಂದು ನೇತ್ರಾವತಿ ನದಿಯಲ್ಲಿ ಶ್ರೀ ದೇವರ ಅವಭ್ರತಸ್ನಾನ ಹಾಗೂ ರಾತ್ರಿ ಧ್ವಜಾವರೋಹಣ ಕಾರ್ಯಕ್ರಮಗಳೊಂದಿಗೆ ವಾರ್ಷಿಕ ವಿಷು ಜಾತ್ರಾ ಮಹೋತ್ಸವ ಸಂಭ್ರಮದಿಂದ ಸಂಪನ್ನಗೊಳ್ಳಲಿದೆ.