ಬೆಳ್ತಂಗಡಿ: ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ್ ರವರ 117ನೇ ಜನ್ಮದಿನಾಚರಣೆ

0

ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖೆ ಹಾಗೂ ಬೆಳ್ತಂಗಡಿ ಪಟ್ಟಣ ಪಂಚಾಯತ್ ಇದರ ಸಂಯುಕ್ತ ಆಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ್ ರವರ 117ನೇ ಜನ್ಮದಿನಾಚರಣೆಯನ್ನು ಬೆಳ್ತಂಗಡಿ ಮಿನಿ ವಿಧಾನ ಸೌಧದಲ್ಲಿ ಎ.5ರಂದು ಆಚರಿಸಲಾಯಿತು.

ಬೆಳ್ತಂಗಡಿ ತಾಲೂಕು ತಹಸೀಲ್ದಾ‌ರ್ ಪೃಥ್ವಿ ಸಾನಿಕಂ ಕಾರ್ಯಕ್ರಮವನ್ನು ಉದ್ಘಾಟಿಸಿ, ಡಾ.ಬಾಬು ಜಗಜೀವನರಾಮ್ ರವರ ಸೇವೆಯ ಕುರಿತು ಮಾತನಾಡಿದರು.

ವೇದಿಕೆಯಲ್ಲಿ ಕಾರ್ಯನಿರ್ವಹಣಾಧಿಕಾರಿ ವೈಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರ ಉಪಸ್ಥಿತರಿದ್ದರು.

ಸಹಾಯಕ ನಿರ್ದೇಶಕ ಹೇಮಚಂದ್ರ ಸ್ವಾಗತಿಸಿ, ಜಯಾನಂದ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here