ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಭೇಟಿ

0

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಎ.05ರಂದು ಬೆಳ್ತಂಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ತಾರಕೇಸರಿ ಯವರು ಭೇಟಿ ನೀಡಿ ಶಾಲಾ ಪ್ರಾರ್ಥನಾ ಅವಧಿಯ ಚಟುವಟಿಕೆಗಳನ್ನು ವೀಕ್ಷಿಸಿದರು.

ಶಾಲಾ ಮುಖ್ಯ ಶಿಕ್ಷಕರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪುಷ್ಪ ನೀಡಿ ಸ್ವಾಗತಿಸಿದರು.

ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಬೇಸಿಗೆ ರಜೆಯ ಮಜಾ ಅನುಭವಿಸುವಲ್ಲಿ ಮಕ್ಕಳು ತೆಗೆದುಕೊಳ್ಳ ಬೇಕಾದ ಮುಂಜಾಗ್ರತೆ, ಹೊಳೆ, ಹಳ್ಳಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು, ಮಜಾ ಮಾಡುವ ಜೊತೆಗೆ ಓದಿಗಾಗಿ ಸ್ವಲ್ಪ ಸಮಯ ಮೀಸಲಿರಿಸಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ನಿಡ್ಲೆ ಕ್ಲಸ್ಟರ್ ನ ಸಂಪನ್ಮೂಲ ಅಧಿಕಾರಿ ಪ್ರತಿಮಾ ಹಾಗೂ ಕೊಕ್ಕಡ ಕ್ಲಸ್ಟರ್ ನ ಸಂಪನ್ಮೂಲ ಅಧಿಕಾರಿ ವಿಲ್ ಫ್ರೆಡ್ ರವರು ಉಪಸ್ಥಿತರಿದ್ದರು.

ಶಿಕ್ಷಕಿ ಸೀಮಾ ಸ್ವಾಗತಿಸಿ, ಜೋಸೆಫ್ ರವರು ವಂದಿಸಿದರು.

LEAVE A REPLY

Please enter your comment!
Please enter your name here