ಕಲ್ಮಂಜ: ಬೆರ್ಕೆ ಪರಿಸರದಲ್ಲಿ ಒಂಟಿ ಸಲಗ ಪ್ರತ್ಯಕ್ಷ- ಕೃಷಿಗೆ ಹಾನಿ

0

ಕಲ್ಮಂಜ: ಬೆರ್ಕೆ ಎಂಬಲ್ಲಿ ಎಂ.ಎಸ್. ಪ್ರಕಾಶ್ ಎಂಬವರ ತೋಟಕ್ಕೆ ಶನಿವಾರ ಏ.06 ರಂದು ತಡರಾತ್ರಿ ಒಂಟಿ ಸಲಗ ಪ್ರವೇಶಿಸಿ ಕೃಷಿಹಾನಿ ಉಂಟು ಮಾಡಿದೆ.

ಸಲಗವು ಸುಮಾರು 40ಕ್ಕಿಂತ ಅಧಿಕ ಬಾಳೆ ಗಿಡ 5 ಅಡಕೆ ಮರಗಳನ್ನು ಧ್ವಂಸಗೊಳಿಸಿದೆ.

ಕಳೆದ ಸುಮಾರು ಎರಡು ತಿಂಗಳ ಹಿಂದೆ ಇದೇ ತೋಟಕ್ಕೆ ಪ್ರವೇಶಿಸಿದ್ದ ಕಾಡಾನೆ ಆಗ ಈಚಲ ಮರವನ್ನು ಮುರಿದು ಹಾಕಿತ್ತು. ಮನೆಯವರು ಅದನ್ನು ಹಾಗೆ ಬಿಟ್ಟಿದ್ದರು.

ಈಚಲ ಮರವನ್ನು ಆನೆ ಶನಿವಾರ ಸಂಪೂರ್ಣ ಪುಡಿಗಟ್ಟಿದೆ.

LEAVE A REPLY

Please enter your comment!
Please enter your name here