ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ವಾಲ್ಟರ್ ಸಿಕ್ವೇರಾ, ಕಾರ್ಯದರ್ಶಿಯಾಗಿ ಜೋನ್ ಅರ್ವೀನ್ ಡಿ’ಸೋಜಾ, ಕೋಶಾಧಿಕಾರಿಯಾಗಿ ಪುಷ್ಪರಾಜ್ ಶೆಟ್ಟಿ ಆಯ್ಕೆ

0

ಬೆಳ್ತಂಗಡಿ: ಮಂಜುಶ್ರೀ ಸೀನಿಯರ್ ಚೇಂಬರ್ ನ 2024-25ನೇ ಸಾಲಿನ ಅಧ್ಯಕ್ಷರಾಗಿ ಸನ್ ರಾಕ್ ರೆಸಾರ್ಟ್ ನ ಮಾಲಕ ವಾಲ್ಟರ್ ಸಿಕ್ವೇರಾ, ಕಾರ್ಯದರ್ಶಿಯಾಗಿ ನ್ಯಾಶನಲ್ ಜೀವ ವಿಮಾ ನಿಗಮದ ಅಭಿವೃದ್ಧಿ ಅಧಿಕಾರಿ ಜೋನ್ ಅರ್ವೀನ್ ಡಿ’ಸೋಜಾ ಆಯ್ಕೆಯಾಗಿದ್ದಾರೆ.

ಸೀನಿಯರ್ ಚೇಂಬರ್ ಅಧ್ಯಕ್ಷರಾದ ಪೃಥ್ವಿರಂಜನ್ ಇವರ ಅಧ್ಯಕ್ಷತೆಯಲ್ಲಿ ಮಾರ್ಚ್ ನಲ್ಲಿ ನಡೆದ ಮಾಸಿಕ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು.

ಕೋಶಾಧಿಕಾರಿಯಾಗಿ ಪ್ರಕಾಶ್ ಎಲೆಕ್ಟ್ರಾನಿಕ್ಸ್ ಮಾಲಕ ಪುಷ್ಪರಾಜ್ ಶೆಟ್ಟಿ, ಉಪಾಧ್ಯಕ್ಷರಾಗಿ ಸುದ್ದಿ ಬಿಡುಗಡೆಯ ವ್ಯವಸ್ಥಾಪಕ ಮಂಜುನಾಥ ರೈ, ಜೊತೆ ಕಾರ್ಯದರ್ಶಿಯಾಗಿ ಹರೀಶ್ ಶೆಟ್ಟಿ ಇವರನ್ನು ಸರ್ವ ಸದಸ್ಯರ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಎ.15 ಪದಗ್ರಹಣ ಸಮಾರಂಭ: ಎ.15ರಂದು ಸನ್ ರಾಕ್ ರೆಸಾರ್ಟ್ ಸಭಾ ಭವನದಲ್ಲಿ ನಡೆಯುವ ಪದಗ್ರಹಣ ಕಾರ್ಯಕ್ರಮದಲ್ಲಿ ಸೀನಿಯರ್ ಚೇಂಬರ್ ನ ರಾಷ್ಟ್ರೀಯ ಅಧ್ಯಕ್ಷ ಚಿತ್ರಾಕುಮಾರ್ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here