ಎ.13: ಮಾಯ ಮಹೇಶ್ವರ ಭಜನಾ ಮಂಡಳಿ ವತಿಯಿಂದ ಭಜನಾ ಕಮ್ಮಟೋತ್ಸವ

0

ಬೆಳಾಲು: ಶ್ರೀ ಮಾಯ ಮಹೇಶ್ವರ ಭಜನಾ ಮಂಡಳಿ ಮಾಯ ಬೆಳಾಲು ಇದರ ಆಶ್ರಯದಲ್ಲಿ ಎ.13ರಂದು ಶ್ರೀ ಮಾಯ ಮಹದೇವ ದೇವಸ್ಥಾನದ ವಠಾರದಲ್ಲಿ ಭಜನಾ ಕಮ್ಮಟೋತ್ಸವ ಜರಗಲಿದೆ.

ಶ್ರೀ ಮಾಯ ಮಹೇಶ್ವರ ಭಜನಾ ಮಂಡಳಿ 42ನೇ ವರ್ಷಗಳ ಭಕ್ತಿ ಪಯಣದೊಂದಿಗೆ ಮುನ್ನಡೆಯುತ್ತಿರುವ ಸಂದರ್ಭದಲ್ಲಿ ಭಜನಾ ಕಮ್ಮಟೋತ್ಸವ ನಡೆಯಲಿದ್ದು, ಸಂಜೆ ಗಣ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮದ ಹಾಗೂ ಬಳಿಕ ಭಜನೆ ಕಮ್ಮಟ ಉದ್ಘಾಟನೆ ನಡೆಯಲಿದೆ.

ಭಜನಾ ಕಮ್ಮಟೋತ್ಸವದಲ್ಲಿ ತಾಲೂಕಿನ ವಿವಿಧ ಭಜನಾ ಮಂಡಳಿಗಳು ಭಾಗವಹಿಸಲಿದೆ.

ನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ ಮಹನೀಯರನ್ನು, ಭಜನಾ ಮಂಡಳಿಯಲ್ಲಿ ಸೇವೆ ಸಲ್ಲಿಸಿದ ಅಧ್ಯಕ್ಷರುಗಳಿಗೆ, ಕಾರ್ಯದರ್ಶಿಗಳಿಗೆ, ಮಕ್ಕಳ ಭಜನಾ ತಂಡವನ್ನು ಮುನ್ನಡೆಸುತ್ತಿರುವವರಿಗೆ ಗೌರವಾರ್ಪಣೆ ನಡೆಯಲಿದೆ.

ಸಭಾ ಕಾರ್ಯಕ್ರಮದ ನಂತರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಲನಚಿತ್ರ ನಟ ತೆಲಿಕೆದ ತೆನಾಲಿ ಸುನಿಲ್ ನೆಲ್ಲಿಗುಡ್ಡೆ ತಂಡದಿಂದ ತೆಲಿಕೆದ ಬರ್ಸ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಭಜನಾ ಮಂಡಳಿಯ ಅಧ್ಯಕ್ಷ ಹರೀಶ್ ಆಚಾರ್ಯ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here