ಇಂದಬೆಟ್ಟು: ಬೆಳ್ಳೂರು ಬೈಲಿನ ನೇತ್ರಾವತಿ ನದಿಯಲ್ಲಿ‌ ಅಕ್ರಮ ಮರಳು ಗಣಿಗಾರಿಕೆ- ಬೆಳ್ತಂಗಡಿ ಪೊಲೀಸರಿಂದ ವಶ

0

ಬೆಳ್ತಂಗಡಿ: ತಾಲೂಕಿನ ಇಂದಬೆಟ್ಟು ಗ್ರಾಮದ ಬೆಳ್ಳೂರು ಬೈಲಿನಲ್ಲಿ ನೇತ್ರಾವತಿ ನದಿಯಲ್ಲಿ‌ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆಗೆ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸರು ವಾಹನ ಹಾಗೂ ಮರಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.

ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಬೆಪೊಲೀಸ್ ಉಪ ನಿರೀಕ್ಷಕರಾದ ಮುರಳೀಧರ್ ಕೆ.ಜಿ ಅವರು ಹಾಗೂ ತಂಡ ದಾಳಿ ನಡೆಸಿದ್ದು ಈ ವೇಳೆ ಇಂದಬೆಟ್ಟು ಗ್ರಾಮದ ನಿವಾಸಿಗಳಾದ ಡೀಕಯ್ಯ ಹಾಗೂ ರಿಯಾಜ್ ಎಂಬವರು ಅಕ್ರಮವಾಗಿ ಮರಳು ಕಳ್ಳತನ ಮಾಡಿ‌ ಪಿಕಪ್ ವಾಹನದಲ್ಲಿ ಸಾಗಾಟ ಮಾಡುತ್ತಿರುವುದು ಕಂಡು ಬಂದಿದ್ದು ಪಿಕಪ್ ವಾಹನವನ್ನು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ಆರೋಪಿಗಳ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here