ಕಣಿಯೂರು ನಿವೃತ್ತ ಶಿಕ್ಷಕಿಗೆ ಕ್ಲಸ್ಟರ್ ವತಿಯಿಂದ ಸನ್ಮಾನ

0

ಕಣಿಯೂರು: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕಣಿಯೂರು ಕಸಬಾ ಇಲ್ಲಿ ಪ್ರಭಾರ ಮುಖ್ಯೋಪಾಧ್ಯಾಯಿನಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹರ್ಷಲಾ ರವರು ಮಾ.31ರಂದು ಸೇವಾ ನಿವೃತ್ತಿ ಪಡೆದರು.

ಎ.5ರಂದು ಕುಪ್ಪೆಟ್ಟಿ ಕ್ಲಸ್ಟರ್ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಬೆಳ್ತಂಗಡಿ ಪ್ರಾ.ಶಾ.ಶಿ.ಸಂಘದ ಅಧ್ಯಕ್ಷ ಕಿಶೋರ್ ಕುಮಾರ್ ರವರು ಸಭಾಧ್ಯಕ್ಷತೆಯನ್ನು ವಹಿಸಿದ್ದರು.ಮಾಧವ ಗೌಡ ಹಾಗೂ ರೀಟಾರವರು ತಮ್ಮ ಅನಿಸಿಕೆಗಳನ್ನು ಹೇಳಿದರು. ಪ್ರಾ‌.ಶಾ.ಶಿ.ಸಂಘದ ಕಾರ್ಯದರ್ಶಿ ಸುರೇಶ್ ಮಾಚಾರ್ ರವರು ಸಂದರ್ಭೋಚಿತ ಮಾತುಗಳನ್ನಾಡಿದರು.ತಾಲೂಕು ಮುಖ್ಯೋಪಾಧ್ಯಾಯರ ಸಂಘದ ಸಂಘಟನಾ ಕಾರ್ಯದರ್ಶಿಯಾದ ಚಂದ್ರಾವತಿಯವರು ಶುಭ ಹಾರೈಸಿದರು.

ಕರಾಯ ಕೇಂದ್ರ ಸಂಪನ್ಮೂಲ ವ್ಯಕ್ತಿ ಮಹಮ್ಮದ್ ಶರೀಫ್, ತುರ್ಕಳಿಕೆ ಶಾಲೆಯ ಮುಖ್ಯ ಗುರುಗಳಾದ ತಿಪ್ಪಣ್ಣ ರವರು,ನೆಕ್ಕಿಲು ಶಾಲೆಯ ಮುಖ್ಯ ಶಿಕ್ಷಕರಾದ ಬಿರಾದಾರ್ ರವರು ನಿವೃತ್ತಿ ಶಿಕ್ಷಕಿಯವರಿಗೆ ಶುಭವನ್ನು ಹಾರೈಸಿದರು.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಮತ್ತು ಕುಪ್ಪೆಟ್ಟಿ ಕ್ಲಸ್ಟರ್ ವತಿಯಿಂದ ನಿವೃತ್ತ ಶಿಕ್ಷಕಿ ಹರ್ಷಲಾರವರನ್ನು ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿದ ಹರ್ಷಲಾರವರು ತಮ್ಮ ಸೇವಾವಧಿಯ ಸವಿನೆನಪುಗಳನ್ನು ಮೆಲುಕು ಹಾಕಿದರು.ಕುಪ್ಪೆಟ್ಟಿ ಸಮೂಹ ಸಂಪನ್ಮೂಲ ವ್ಯಕ್ತಿ ಸಂಧ್ಯಾ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

ಪೆರ್ಲಬೈಪಾಡಿ ಶಾಲೆಯ ಮುಖ್ಯ ಶಿಕ್ಷಕಿ ನಳಿನಿಯವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಕುಪ್ಪೆಟ್ಟಿ ಶಾಲೆಯ ಮುಖ್ಯ ಶಿಕ್ಷಕಿ ವನಿತಾ ರವರು ಸ್ವಾಗತಿಸಿ, ಕಾರಿಂಜ ಶಾಲೆಯ ಮುಖ್ಯ ಶಿಕ್ಷಕಿ ಗಿರಿಜಾ ರವರು ಧನ್ಯವಾದ ಸಲ್ಲಿಸಿದರು.

LEAVE A REPLY

Please enter your comment!
Please enter your name here