Site icon Suddi Belthangady

ಬಂಟ್ವಾಳದಲ್ಲಿ ನಡೆದ ಬೈಕ್ ಅಪಘಾತ: ಗಂಭೀರವಾಗಿ ಗಾಯಗೊಂಡಿದ್ದ ಪುದುವೆಟ್ಟು ಗ್ರಾಮದ ವಿದ್ಯಾರ್ಥಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

ಬೆಳ್ತಂಗಡಿ: ಬಂಟ್ವಾಳದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪುದುವೆಟ್ಟು ಗ್ರಾಮದ ವಿದ್ಯಾರ್ಥಿಯೊಬ್ಬ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರ ಏ.10 ಸಂಭವಿಸಿದೆ.

ಮೃತ ವಿದ್ಯಾರ್ಥಿ ಪುದುವೆಟ್ಟು ಗ್ರಾಮದ ಮಠ ನಿವಾಸಿ ಸನ್ನಿ ಕಂಡತ್ತಿಂಕರ ಎಂಬವರ ಪುತ್ರ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಎಂ.ಬಿ.ಎ ಓದುತ್ತಿರುವ ಶಾರೋನ್ (21 ವರ್ಷ) ಎಂಬಾತನಾಗಿದ್ದಾನೆ.

ಈತ ತನ್ನ ಗೆಳೆಯ ಕಳೆಂಜ ಗ್ರಾಮದ ನಿವಾಸಿ ವಿದ್ಯಾರ್ಥಿಯಾಗಿರುವ ಸೆಬಾಸ್ಟಿಯನ್ ಎಂಬವರೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಬಿಸಿರೋಡು ಕೈಕಂಬ ಎಂಬಲ್ಲಿ ಅಪಘಾತ ಸಂಭವಿಸಿತ್ತು.

ಗಂಭೀರವಾಗಿ ಗಾಯಗೊಂಡ ಇಬ್ಬರನ್ನೂ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಶಾರೋನ್ ಬುಧವಾರ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಘಟನೆಯ ಬಗ್ಗೆ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Exit mobile version