ಬೆಳ್ತಂಗಡಿ ಜೆಸಿಐ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನ ಆಚರಣೆ

0

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಪ್ರಯುಕ್ತ ರಕ್ತದಾನದ ಮಹತ್ವದ ಬಗ್ಗೆ ಕಾರ್ಯಕ್ರಮವನ್ನು ಎ.8ರಂದು ಹಮ್ಮಿಕೊಳ್ಳಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆಯ ಶ್ರಿ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನ್ಯಾಚುರೋಪತಿ ಕಾಲೇಜಿನ ಮೆಡಿಕಲ್ ಸೈನ್ಸ್ ವಿಭಾಗದ ಡೀನ್ ಡಾ.ಬಾಲಕೃಷ್ಣ ಶೆಟ್ಟಿ ಭಾಗವಹಿಸಿ ರಕ್ತದಾನದ ಮಹತ್ವದ ಬಗ್ಗೆ ಮಾರ್ಗದರ್ಶನ ನೀಡಿದರು.

ರಕ್ತದಾನದ ಮುಖಾಂತರ ಉತ್ತಮ ಆರೋಗ್ಯವನ್ನು ವೃದ್ಧಿಸಿಕೊಳ್ಳುವ ಬಗ್ಗೆ ಹಾಗೂ ಮಧುಮೇಹವನ್ನು ತಡೆಗಟ್ಟುವ ಬಗ್ಗೆಯೂ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಘಟಕದ ಅಧ್ಯಕ್ಷ ರಂಜಿತ್ ಎಚ್ ಡಿಯವರು ವಹಿಸಿ, ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ವಲಯ ಉಪಾಧ್ಯಕ್ಷ ಶಂಕರ್ ರಾವ್, ಜೆ ಜೆ ಸಿ ಅಧ್ಯಕ್ಷರಾದ ಸಮನ್ವಿತ್ ಕುಮಾರ್ ಉಪಸ್ಥಿತರಿದ್ದರು.

ವೇದಿಕೆ ಆಹ್ವಾನವನ್ನು ಉಪಾಧ್ಯಕ್ಷ ಶೈಲೇಶ್, ಜೆಸಿ ವಾಣಿಯನ್ನು ಜೊತೆ ಕಾರ್ಯದರ್ಶಿಗಳಾದ ಪ್ರಮೋದ್ ಕೆ ಹಾಗೂ ಸಂಪನ್ಮೂಲ ವ್ಯಕ್ತಿಯ ಪರಿಚಯವನ್ನು ಸದಸ್ಯ ರಜತ್ ನಡೆಸಿಕೊಟ್ಟರು.

ಕಾರ್ಯಕ್ರಮವನ್ನು ಸದಸ್ಯ ಅನನ್ಯ ಜೈನ್ ಸಂಯೋಜಿಸಿದರು. ಕಾರ್ಯದರ್ಶಿ ಅನುದೀಪ್ ಜೈನ್ವಂದಿಸಿದರು.

ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here