ಅರಸಿನಮಕ್ಕಿ ಚುನಾವಣಾ ಪ್ರಚಾರಕ್ಕೆ ಕ್ಯಾ.ಬ್ರಿಜೇಶ್ ಚೌಟ ಭೇಟಿ

0

ಅರಸಿನಮಕ್ಕಿ: ಲೋಕಸಭಾ ಚುನಾವಣೆ ಪ್ರಚಾರದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅರಸಿನಮಕ್ಕಿಯ ಉದ್ಯಮಿ ಗಣೇಶ್ ಭಿಡೆ ಅವರ ಮನೆಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿದರು.

ಈ ಸಂಧರ್ಭದಲ್ಲಿ ಶಾಸಕ ಹರೀಶ್ ಪೂಂಜಾ, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಹರಿಕೃಷ್ಣ ಬಂಟ್ವಾಳ, ಪ್ರಶಾಂತ್ ಪಾರೆಂಕಿ, ಜಯಾನಂದ್ ಪ್ರಜ್ವಲ್, ಪಂಚಾಯತ್ ಉಪಾಧ್ಯಕ್ಷ ಸುಧೀರ್ ಕುಮಾರ್ ಎಂ ಎಸ್, ಧರ್ಮಸ್ಥಳ ಶಕ್ತಿ ಕೇಂದ್ರ ಅಧ್ಯಕ್ಷ ಹರೀಶ್ ಕೊಯ್ಲ, ಕಾರ್ಯದರ್ಶಿ ಗಣೇಶ್ ಕೆ ಹೊಸ್ತೋಟ, ಅರಸಿನಮಕ್ಕಿ ಶಕ್ತಿ ಕೇಂದ್ರ ಅಧ್ಯಕ್ಷ ಜಯಪ್ರಕಾಶ್, ಪ್ರೇಮಚಂದ್ರ ಹಾಗೂ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here