ಕುಕ್ಕೇಡಿ-ನಿಟ್ಟಡೆ ಅಂಬೇಡ್ಕರ್ ವಾದ ಗ್ರಾಮ ಶಾಖೆ ವತಿಯಿಂದ ಡಾ.ಬಿ.ಆರ್ ಅಂಬೇಡ್ಕರ್ ದಿನಾಚರಣೆ

0

ಕುಕ್ಕೇಡಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಗ್ರಾಮ ಶಾಖೆ ಕುಕ್ಕೇಡಿ ನಿಟ್ಟಡೆ ಇದರ ವತಿಯಿಂದ ಇಂದು ವಿಶ್ವರತ್ನ ಡಾ ಬಿ ಆರ್ ಅಂಬೇಡ್ಕರ್ ರವರ 133ನೇ ಜನ್ಮದಿನಾಚರಣೆಯನ್ನು ಕುಕ್ಕೇಡಿ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಸಂಘಟನಾ ಸಂಚಾಲಕರಾದ ಶೇಖರ್ ಕುಕ್ಕೇಡಿ, ಕುಕ್ಕೇಡಿ ಗ್ರಾಮ ಪಂಚಾಯತಿನ ಸದಸ್ಯರಾದ ಗುಣವತಿ ಡಿ, ತೇಜಾಕ್ಷಿ, ರಜನಿ, ವೇಣೂರು ಹೋಬಳಿ ಸಂಚಾಲಕರಾದ ಚರಣ್ ರಾಜ್ ನಿಟ್ಟಡೆ ಹಾಗೂ ಹೋಬಳಿ ಪದಾಧಿಕಾರಿಗಳು, ಗ್ರಾಮ ಸಮಿತಿಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here