ಶ್ರೀ ರಾಮ ಕ್ಷೇತ್ರದಲ್ಲಿ ಬೆಳ್ಳಿ ರಥೋತ್ಸವ

0

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ನಡೆಯುತ್ತಿರುವ 64ನೇ ವರ್ಷದ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ ಅಂಗವಾಗಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಎ.15ರಂದು ಬೆಳಿಗ್ಗೆ ಸಹಸ್ರನಾಮಯಾಗ, ಶ್ರೀ ಗೋಪಾಲಕೃಷ್ಣದೇವರಿಗೆ ವಿಶೇಷ ಪೂಜೆ, ರಾತ್ರಿ ಬಲಿಮೂರ್ತಿ ಉತ್ಸವ ಮತ್ತು ಬೆಳ್ಳಿ ರಥೋತ್ಸವ ನಡೆಯಿತು.

ಮೀನುಗಾರಿಕೆ, ಒಳನಾಡು ಬಂದರು ಸಚಿವ ಮಾಂಕಾಳ್ ಎಸ್. ವೈದ್ಯ ಬೆಳ್ಳಿ ರಥೋತ್ಸವದ ಸೇವಾಕರ್ತರಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here