ವಾಣಿ ಶಿಕ್ಷಣ ಸಂಸ್ಥೆಗಳ ಬಸ್‌ ಚಾಲಕ ಶಶಿಧರ ಗೌಡ ಪಣಿಕ್ಕಲ್ ಹೃದಯಾಘಾತದಿಂದ ನಿಧನ

0

ಬೆಳ್ತಂಗಡಿ : ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ತಾತ್ಕಾಲಿಕ ಬಸ್ ಚಾಲಕ ವಿನಯ (ಶಶಿಧರ ಗೌಡ) (58 ವರ್ಷ) ಹೃದಯಾಘಾತದಿಂದ ನಿಧನರಾದ ಘಟನೆ ಎ.15ರಂದು ನಡೆದಿದೆ.ಇವರು ವಾಣಿ ಶಿಕ್ಷಣ ಸಂಸ್ಥೆಗಳ ಶಾಲಾ ಮಕ್ಕಳ ಬಸ್ ನಲ್ಲಿ ತಾತ್ಕಾಲಿಕ ಚಾಲಕರಾಗಿ ಕೆಲವು ವರ್ಷಗಳಿಂದ ಉತ್ತಮವಾಗಿ ಕೆಲಸ ನಿರ್ವಹಿಸಿದ್ದರು.

ಮಂಗಳೂರು ಬೆಸೆಂಟ್ ಕಾಲೇಜ್‌ನಲ್ಲಿ ಹತ್ತನೇ ತರಗತಿ ಮಕ್ಕಳ ಪ್ರಶ್ನೆ ಪರೀಕ್ಷೆ ಮೌಲ್ಯಮಾಪನ ಮಾಡಲು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರನ್ನು ಮಂಗಳೂರಿಗೆ ಬಸ್ಸಿನಲ್ಲಿ ಕರೆದುಕೊಂಡು ಹೋಗಿದ್ದರು.ಮಧ್ಯಾಹ್ನ ಊಟ ಮುಗಿದ ನಂತರ ಬಸ್ ನಲ್ಲಿ ವಿಶ್ರಾಂತಿಗಾಗಿ ಮಲಗಿದ್ದ ಸಮಯದಲ್ಲಿ ಹೃದಯಾಘಾತದಿಂದ ನಿಧನರಾದರು.

ಸಂಜೆ ಶಿಕ್ಷಕರು ಬಂದು ಬಸ್ ಹತ್ತಿ ನೋಡಿದಾಗ ಮಲಗಿದ್ದ ಸ್ಥಿತಿಯಲ್ಲಿದ್ದರು.ನಂತರ ಶಿಕ್ಷಕರು ಅವರನ್ನು ಎಬ್ಬಿಸುವಾಗ ಚಾಲಕ ವಿನಯ (ಶಶಿಧರ) ಗೌಡ ಮೃತ ಪಟ್ಟಿರುವುದನ್ನು ಗಮನಿಸಿ ಪಕ್ಕದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಪರೀಕ್ಷಿಸಿದಾಗ ಚಾಲಕ ಮೃತಪಟ್ಟಿರುವುದಾಗಿ ಧೃಡ ಪಡಿಸಿದರು.

LEAVE A REPLY

Please enter your comment!
Please enter your name here